ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಅತ್ಯಂತ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 20 ವರ್ಷದ ಯುವತಿಯ ಮೇಲೆ ತಂದೆಯೇ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದ ಪರಿಣಾಮ, ಆಕೆ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ.
ಚಿಕಿತ್ಸೆಯ ವೇಳೆ ಭಯಾನಕ ಸತ್ಯ ಬಹಿರಂಗ
ಯುವತಿ ಹೊಟ್ಟೆ ನೋವು ಬಗ್ಗೆ ದೂರು ನೀಡಿದ ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಾಗ ಈ ಹೀನ ಕೃತ್ಯ ಪತ್ತೆಯಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದ್ದು, ತನಿಖೆ ನಡೆಸಿದ ವೇಳೆ ಆಕೆಯ ತಂದೆ ಅಪ್ಪಯ್ಯಪ್ಪನೇ ಈ ಕೃತ್ಯಕ್ಕೆ ಕಾರಣನಾಗಿರುವುದು ಬಹಿರಂಗವಾಗಿದೆ.
ತಂದೆಯ ವಿಕೃತ ಕೃತ್ಯ
ಅಪ್ಪಯ್ಯಪ್ಪನಿಗೆ ಮೂರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗನಿದ್ದರು. ಪತ್ನಿ ಇಲ್ಲದ ಕಾರಣದಿಂದ ಮಕ್ಕಳ ಸಂಭಾಳಣೆಯನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಮಾಡಿದರೂ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮಪಿಪಾಸೆ ತೀರಿಸಿಕೊಂಡಿದ್ದ. ಕುಟುಂಬದ ನಾಮಸ್ಮರಣೆಯೇ ಇಲ್ಲದೆ, ತನ್ನದೇ ಪುತ್ರಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ.
ಆರೋಪಿಗೆ ಬಂಧನ
ಈ ಅಮಾನವೀಯ ಘಟನೆಯು ಬಹಿರಂಗವಾದ ನಂತರ, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಯ ವೈದ್ಯಕೀಯ ಪರೀಕ್ಷೆಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಈ ಪೈಶಾಚಿಕ ಘಟನೆಯು ಊರಮಟ್ಟದಲ್ಲಿ ಆಕ್ರೋಶ ಮೂಡಿಸಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…