ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಅತ್ಯಂತ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. 20 ವರ್ಷದ ಯುವತಿಯ ಮೇಲೆ ತಂದೆಯೇ 5 ತಿಂಗಳಿನಿಂದ ನಿರಂತರ ಅತ್ಯಾಚಾರ ಎಸಗಿದ್ದ ಪರಿಣಾಮ, ಆಕೆ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ.
ಚಿಕಿತ್ಸೆಯ ವೇಳೆ ಭಯಾನಕ ಸತ್ಯ ಬಹಿರಂಗ
ಯುವತಿ ಹೊಟ್ಟೆ ನೋವು ಬಗ್ಗೆ ದೂರು ನೀಡಿದ ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಾಗ ಈ ಹೀನ ಕೃತ್ಯ ಪತ್ತೆಯಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದ್ದು, ತನಿಖೆ ನಡೆಸಿದ ವೇಳೆ ಆಕೆಯ ತಂದೆ ಅಪ್ಪಯ್ಯಪ್ಪನೇ ಈ ಕೃತ್ಯಕ್ಕೆ ಕಾರಣನಾಗಿರುವುದು ಬಹಿರಂಗವಾಗಿದೆ.
ತಂದೆಯ ವಿಕೃತ ಕೃತ್ಯ
ಅಪ್ಪಯ್ಯಪ್ಪನಿಗೆ ಮೂರು ಹೆಣ್ಣುಮಕ್ಕಳು ಹಾಗೂ ಒಬ್ಬ ಗಂಡು ಮಗನಿದ್ದರು. ಪತ್ನಿ ಇಲ್ಲದ ಕಾರಣದಿಂದ ಮಕ್ಕಳ ಸಂಭಾಳಣೆಯನ್ನು ತಾನೇ ನೋಡಿಕೊಳ್ಳುತ್ತಿದ್ದ. ಮೊದಲ ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಮಾಡಿದರೂ, 20 ವರ್ಷದ ಮೂರನೇ ಮಗಳ ಮೇಲೆ ತನ್ನ ಕಾಮಪಿಪಾಸೆ ತೀರಿಸಿಕೊಂಡಿದ್ದ. ಕುಟುಂಬದ ನಾಮಸ್ಮರಣೆಯೇ ಇಲ್ಲದೆ, ತನ್ನದೇ ಪುತ್ರಿಯ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ.
ಆರೋಪಿಗೆ ಬಂಧನ
ಈ ಅಮಾನವೀಯ ಘಟನೆಯು ಬಹಿರಂಗವಾದ ನಂತರ, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಯುವತಿಯ ವೈದ್ಯಕೀಯ ಪರೀಕ್ಷೆಯ ನಂತರ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಈ ಪೈಶಾಚಿಕ ಘಟನೆಯು ಊರಮಟ್ಟದಲ್ಲಿ ಆಕ್ರೋಶ ಮೂಡಿಸಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…