Crime

ಮಹಿಳಾ ಇನ್‌ಸ್ಪೆಕ್ಟರ್‌ಗೆ ನಿಂದನೆ, ಹಲ್ಲೆ: ಬ್ಯಾಂಕ್ ಉದ್ಯೋಗಿ, ಸ್ನೇಹಿತೆ ಬಂಧನ

ಮಹದೇವಪುರ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್‌ ಅನಿತಾ ಕುಮಾರಿಯವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಹಲ್ಲೆ ನಡೆಸಿದ ಆರೋಪದ ಮೇಲೆ ಬ್ಯಾಂಕ್‌ ಉದ್ಯೋಗಿ ಮತ್ತು ಆತನ ಸ್ನೇಹಿತೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರು?
ಬಂಧಿತರನ್ನು ಬಿ.ನಾರಾಯಣಪುರ ನಿವಾಸಿ ರಾಕೇಶ್‌ ಕುಮಾರ್‌ (35) ಮತ್ತು ಆತನ ಸ್ನೇಹಿತೆ ಬೈಸಾಕಿ (30) ಎಂದು ಗುರುತಿಸಲಾಗಿದೆ. ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಡಿ ಮಹದೇವಪುರ ಪೊಲೀಸರು ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆ ಹೇಗೆ ನಡೆಯಿತು?
ಶನಿವಾರ ತಡರಾತ್ರಿ 12 ಗಂಟೆ ಸುಮಾರಿಗೆ ಮಹದೇವಪುರ ಸಂಚಾರ ಠಾಣೆಯ ಪಿಐ ಅನಿತಾ ಕುಮಾರಿ, ಸಿಂಗನಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಡ್ರಂಕ್‌ ಅಂಡ್‌ ಡ್ರೈವ್‌ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ರಾಮಮೂರ್ತಿನಗರದಿಂದ ಸಿಂಗನಪಾಳ್ಯ ಕಡೆಗೆ ಬುಲೆಟ್‌ನಲ್ಲಿ ತೆರಳುತ್ತಿದ್ದ ರಾಕೇಶ್‌ ಕುಮಾರ್‌ ಮತ್ತು ಬೈಸಾಕಿಯನ್ನು ಪೊಲೀಸರು ತಡೆದು, ಮದ್ಯಪಾನದ ಪರೀಕ್ಷೆ ನಡೆಸಿದರು.

ಪರೀಕ್ಷೆಯಲ್ಲಿ ರಾಕೇಶ್‌ ಕುಮಾರ್‌ ಮದ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ನಿಯಮಾನುಸಾರ ದಂಡ ವಿಧಿಸಿ ಬುಲೆಟ್‌ ಜಪ್ತಿ ಮಾಡಲಾಯಿತು. ಡ್ರಂಕ್‌ ಅಂಡ್‌ ಡ್ರೈವ್‌ ಪ್ರಕರಣದಲ್ಲಿ ದಂಡವನ್ನು ಆನ್‌ಲೈನ್‌ ಅಥವಾ ಕೋರ್ಟ್‌ನಲ್ಲಿ ಪಾವತಿಸಿದ ನಂತರ ವಾಹನ ಹಿಂತಿರುಗಿಸಬಹುದೆಂದು ಪೊಲೀಸರೊಬ್ಬರು ಅವರಿಗೆ ತಿಳಿಸಿದರು.

ಕೋಪಗೊಂಡ ಆರೋಪಿ ಜೋಡಿ ಪೊಲೀಸರ ಮೇಲೆ ಹಲ್ಲೆ
ಈ ನಿರ್ಧಾರದಿಂದ ಕೋಪಗೊಂಡ ರಾಕೇಶ್‌ ಕುಮಾರ್‌, ತನ್ನ ಬುಲೆಟ್‌ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡನು. ಆದರೆ, ನಿಯಮಗಳ ಪ್ರಕಾರ ಮದ್ಯ ಸೇವಿಸಿರುವ ಕಾರಣ ವಾಹನ ನೀಡಲು ಸಾಧ್ಯವಿಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದರು. ಇದರಿಂದ ಸಿಟ್ಟಿಗೊಂಡ ಬೈಸಾಕಿ, ಸುಮಾರು ಅರ್ಧ ಗಂಟೆಗಳ ಕಾಲ ಪಿಐ ಅನಿತಾ ಕುಮಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದಳು ಮತ್ತು ಅವರ ಮೇಲೆ ಹಲ್ಲೆ ನಡೆಸಿದಳು. ಈ ವೇಳೆ ರಾಕೇಶ್‌ ಕೂಡ ಪೊಲೀಸರೊಂದಿಗೆ ಕೈಹಾಕಿದನು.

ಆರೋಪಿಗಳ ವೈದ್ಯಕೀಯ ಪರೀಕ್ಷೆ ಮತ್ತು ಹಿನ್ನೆಲೆ
ಘಟನೆಯ ನಂತರ ಸ್ಥಳದಲ್ಲಿದ್ದ ಇತರೆ ಪೊಲೀಸ್ ಸಿಬ್ಬಂದಿ ಇಬ್ಬರನ್ನೂ ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಅವರು ಕಂಠಪೂರ್ತಿ ಮದ್ಯ ಸೇವಿಸಿರುವುದು ದೃಢಪಟ್ಟಿದೆ.

ಪಶ್ಚಿಮ ಬಂಗಾಳ ಮೂಲದ ರಾಕೇಶ್‌ ಕುಮಾರ್‌ ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದು, ಪತ್ನಿ ಮತ್ತು ಮಕ್ಕಳ ಜತೆ ಬಿ.ನಾರಾಯಣಪುರದಲ್ಲಿ ವಾಸವಿದ್ದ. ಬೈಸಾಕಿಯು ಕೂಡ ಮದುವೆಯಾದ ಮಹಿಳೆಯಾಗಿದ್ದು, ಪತಿ ಮತ್ತು ಮಕ್ಕಳ ಜತೆ ಅದೇ ಪ್ರದೇಶದಲ್ಲಿ ವಾಸವಿದ್ದಳು. ಶನಿವಾರ ರಾತ್ರಿ ಇಬ್ಬರೂ ಪಾರ್ಟಿಯೊಂದಕ್ಕೆ ತೆರಳಿ ಮದ್ಯ ಸೇವಿಸಿ ಬುಲೆಟ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.

ಮಹದೇವಪುರ ಠಾಣೆ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿ ಜೋಡಿಯನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago