Latest

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ

ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಅವರಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಶೆಟ್ಟಿಯವರ ಜೊತೆಗೆ ಈ ಪ್ರಕರಣದಲ್ಲಿ ಆರೋಪಿವಾಗಿದ್ದ ಮೂವರು ಸಹ ದೋಷಿಗಳೆಂದು ತೀರ್ಪು ಪ್ರಕಟವಾಗಿದೆ.

ನ್ಯಾಯಾಲಯದ ತೀರ್ಪು ಮತ್ತು ಮೇಲ್ಮನವಿ ಅವಕಾಶ

ತೀರ್ಪಿನ ಅನ್ವಯ, ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ, ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಧಿಯನ್ನು ನ್ಯಾಯಾಲಯ ನೀಡಿದೆ.

ಪ್ರಕರಣದ ಹಿನ್ನೆಲೆ

ಮಾಜಿ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಮತ್ತು ಮುನಿರಾಜು ಎಂಬುವವರು ಖಾಸಗಿ ಬ್ಯಾಂಕೊಂದರಿಂದ ನಕಲಿ ದಾಖಲೆಗಳನ್ನು ಬಳಸಿ ಕೋಟ್ಯಾಂತರ ರೂ. ಸಾಲ ಪಡೆದಿದ್ದರು. 2012ರಲ್ಲಿ ಈ ವಂಚನೆಯ ಪ್ರಕರಣ ನಡೆದಿದೆ. ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಆರೋಪಿ ವರ್ಗದ ವಿರುದ್ಧ ಪೂರಕ ಸಾಬೀತುಗಳನ್ನು ಪತ್ತೆಹಚ್ಚಿತ್ತು.

ಸಾಲ ವಂಚನೆ: ಆರೋಪ ಸಾಬೀತು

ನಕಲಿ ದಾಖಲೆಗಳ ಆಧಾರದ ಮೇಲೆ ಕೋಟ್ಯಾಂತರ ಸಾಲ ಪಡೆದು ವಂಚನೆ ನಡೆಸಿದ ಆರೋಪ ಇದೀಗ ಸಾಬೀತಾಗಿದೆ. ನ್ಯಾಯಾಲಯದ ತೀರ್ಪು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಕೃಷ್ಣಯ್ಯ ಶೆಟ್ಟಿ ಹಾಗೂ ಇತರ ಆರೋಪಿಗಳು ಮುಂದಿನ ಹಂತದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಈ ತೀರ್ಪಿನೊಂದಿಗೆ ರಾಜ್ಯ ರಾಜಕೀಯ ವಲಯದಲ್ಲಿಯೂ ಚರ್ಚೆ ಆರಂಭವಾಗಿದ್ದು, ರಾಜಕೀಯ ನಾಯಕರು ಮತ್ತು ಸಾರ್ವಜನಿಕರು ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago