Latest

ಬ್ಯಾಂಕ್ ವಂಚನೆ ಪ್ರಕರಣ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ 3 ವರ್ಷ ಜೈಲು ಶಿಕ್ಷೆ

ಬೆಂಗಳೂರು ಜನಪ್ರತಿನಿಧಿ ನ್ಯಾಯಾಲಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಅವರಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ. ಶೆಟ್ಟಿಯವರ ಜೊತೆಗೆ ಈ ಪ್ರಕರಣದಲ್ಲಿ ಆರೋಪಿವಾಗಿದ್ದ ಮೂವರು ಸಹ ದೋಷಿಗಳೆಂದು ತೀರ್ಪು ಪ್ರಕಟವಾಗಿದೆ.

ನ್ಯಾಯಾಲಯದ ತೀರ್ಪು ಮತ್ತು ಮೇಲ್ಮನವಿ ಅವಕಾಶ

ತೀರ್ಪಿನ ಅನ್ವಯ, ಕೃಷ್ಣಯ್ಯ ಶೆಟ್ಟಿ ಮತ್ತು ಇತರ ಆರೋಪಿಗಳಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ, ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಧಿಯನ್ನು ನ್ಯಾಯಾಲಯ ನೀಡಿದೆ.

ಪ್ರಕರಣದ ಹಿನ್ನೆಲೆ

ಮಾಜಿ ಸಚಿವ ಹಾಗೂ ಬಿಜೆಪಿ ನಾಯಕರಾಗಿದ್ದ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಮತ್ತು ಮುನಿರಾಜು ಎಂಬುವವರು ಖಾಸಗಿ ಬ್ಯಾಂಕೊಂದರಿಂದ ನಕಲಿ ದಾಖಲೆಗಳನ್ನು ಬಳಸಿ ಕೋಟ್ಯಾಂತರ ರೂ. ಸಾಲ ಪಡೆದಿದ್ದರು. 2012ರಲ್ಲಿ ಈ ವಂಚನೆಯ ಪ್ರಕರಣ ನಡೆದಿದೆ. ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಿದ್ದು, ಆರೋಪಿ ವರ್ಗದ ವಿರುದ್ಧ ಪೂರಕ ಸಾಬೀತುಗಳನ್ನು ಪತ್ತೆಹಚ್ಚಿತ್ತು.

ಸಾಲ ವಂಚನೆ: ಆರೋಪ ಸಾಬೀತು

ನಕಲಿ ದಾಖಲೆಗಳ ಆಧಾರದ ಮೇಲೆ ಕೋಟ್ಯಾಂತರ ಸಾಲ ಪಡೆದು ವಂಚನೆ ನಡೆಸಿದ ಆರೋಪ ಇದೀಗ ಸಾಬೀತಾಗಿದೆ. ನ್ಯಾಯಾಲಯದ ತೀರ್ಪು ಹೊರಬಿದ್ದಿರುವ ಹಿನ್ನೆಲೆಯಲ್ಲಿ ಕೃಷ್ಣಯ್ಯ ಶೆಟ್ಟಿ ಹಾಗೂ ಇತರ ಆರೋಪಿಗಳು ಮುಂದಿನ ಹಂತದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಈ ತೀರ್ಪಿನೊಂದಿಗೆ ರಾಜ್ಯ ರಾಜಕೀಯ ವಲಯದಲ್ಲಿಯೂ ಚರ್ಚೆ ಆರಂಭವಾಗಿದ್ದು, ರಾಜಕೀಯ ನಾಯಕರು ಮತ್ತು ಸಾರ್ವಜನಿಕರು ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

12 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

12 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

12 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

12 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

12 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

12 hours ago