Categories: Latest

ಬಂಟ್ವಾಳದಲ್ಲಿ ಲಂಚ ಪ್ರಕರಣ: ಉಪ ತಹಶೀಲ್ದಾರ್ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ

ಬಂಟ್ವಾಳ, ಆಗಸ್ಟ್ 13 — ಜಮೀನಿನ ಪೌತಿ ಖಾತೆ ಮಾಡಿಕೊಡುವ ಕೆಲಸಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬುಧವಾರ ಅಪರಾಹ್ನ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಬಂಟ್ವಾಳ ತಾಲೂಕಿನ ಕಂದಾಯ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಹಾಗೂ ದಲಾಲ ಗಣೇಶ್ ವಾಮದಪದವು ಸೇರಿದ್ದಾರೆ.

ದೂರು ಹಿನ್ನಲೆ

ಸಜಿಪಮನ್ನೂರು ಗ್ರಾಮದ ನಿವಾಸಿ ದೂರುದಾರರು, ತಮ್ಮ ತಾಯಿಯ ಪೌತಿ ಖಾತೆ ದಾಖಲಿಸುವ ಕುರಿತು 2021ರಲ್ಲಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಜಿಲ್ಲಾಧಿಕಾರಿ ನ್ಯಾಯಾಲಯವು ಜಮೀನು ಮಂಜೂರಾತಿ ಆದೇಶ ನೀಡಿದ್ದು, ಅದನ್ನು ಸಹಾಯಕ ಆಯುಕ್ತರ ನ್ಯಾಯಾಲಯವೂ ಅಂಗೀಕರಿಸಿತ್ತು. ಸಹಾಯಕ ಆಯುಕ್ತರು ಬಂಟ್ವಾಳ ತಹಶೀಲ್ದಾರರಿಗೆ ಪೌತಿ ಖಾತೆ ದಾಖಲಿಸಲು ಸ್ಪಷ್ಟ ಆದೇಶ ನೀಡಿದ್ದರು.

ಆದಾಗ್ಯೂ ಕಡತ ಕಚೇರಿಯಲ್ಲಿ ಬಾಕಿ ಉಳಿದಿದ್ದು, ಅರ್ಜಿದಾರರು ವಿಚಾರಿಸಿದಾಗ ಕೇಸ್ ವರ್ಕರ್ ಸಂತೋಷ್ ₹1,500 ಹಾಗೂ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ₹20,000 ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ದಾಳಿ ಮತ್ತು ಬಂಧನ

ಲಂಚ ಬೇಡಿಕೆಯ ಬಗ್ಗೆ ಸಾಕ್ಷಿ ಸಹಿತ ದೂರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ತಲುಪಿದ ನಂತರ, ಎಸ್ಪಿ ಕುಮಾರಚಂದ್ರ ಅವರ ನೇತೃತ್ವದ ತಂಡ ಬುಧವಾರ ಬಂಟ್ವಾಳದಲ್ಲಿ ಬಲೆಯೊಡ್ಡಿತು. ಬ್ರೋಕರ್ ಗಣೇಶ್ ಮುಖಾಂತರ ₹20,000 ಲಂಚ ಸ್ವೀಕರಿಸುವ ಕ್ಷಣದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ಬಲೆಗೆ ಹಾಕಿದರು.

ಮುಂದಿನ ತನಿಖೆ

ಪ್ರಾಥಮಿಕ ವಿಚಾರಣೆಯಲ್ಲಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಅವರು ಈ ಹಣವನ್ನು ತಹಶೀಲ್ದಾರ್‌ಗೆ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ. ಹೀಗಾಗಿ, ತಹಶೀಲ್ದಾರ್ ಅವರ ಪಾತ್ರದ ಕುರಿತೂ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ಲಂಚ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ.

nazeer ahamad

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

54 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

2 hours ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

2 hours ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

2 hours ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

21 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago