ಬಂಟ್ವಾಳ, ಆಗಸ್ಟ್ 13 — ಜಮೀನಿನ ಪೌತಿ ಖಾತೆ ಮಾಡಿಕೊಡುವ ಕೆಲಸಕ್ಕೆ ಸಂಬಂಧಿಸಿದಂತೆ ಲಂಚ ಬೇಡಿಕೆಯ ಆರೋಪದ ಹಿನ್ನೆಲೆ, ಲೋಕಾಯುಕ್ತ ಪೊಲೀಸರು ಬುಧವಾರ ಅಪರಾಹ್ನ ಬಂಟ್ವಾಳ ತಾಲೂಕು ಕಚೇರಿಗೆ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಬಂಟ್ವಾಳ ತಾಲೂಕಿನ ಕಂದಾಯ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಹಾಗೂ ದಲಾಲ ಗಣೇಶ್ ವಾಮದಪದವು ಸೇರಿದ್ದಾರೆ.
ದೂರು ಹಿನ್ನಲೆ
ಸಜಿಪಮನ್ನೂರು ಗ್ರಾಮದ ನಿವಾಸಿ ದೂರುದಾರರು, ತಮ್ಮ ತಾಯಿಯ ಪೌತಿ ಖಾತೆ ದಾಖಲಿಸುವ ಕುರಿತು 2021ರಲ್ಲಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಜಿಲ್ಲಾಧಿಕಾರಿ ನ್ಯಾಯಾಲಯವು ಜಮೀನು ಮಂಜೂರಾತಿ ಆದೇಶ ನೀಡಿದ್ದು, ಅದನ್ನು ಸಹಾಯಕ ಆಯುಕ್ತರ ನ್ಯಾಯಾಲಯವೂ ಅಂಗೀಕರಿಸಿತ್ತು. ಸಹಾಯಕ ಆಯುಕ್ತರು ಬಂಟ್ವಾಳ ತಹಶೀಲ್ದಾರರಿಗೆ ಪೌತಿ ಖಾತೆ ದಾಖಲಿಸಲು ಸ್ಪಷ್ಟ ಆದೇಶ ನೀಡಿದ್ದರು.
ಆದಾಗ್ಯೂ ಕಡತ ಕಚೇರಿಯಲ್ಲಿ ಬಾಕಿ ಉಳಿದಿದ್ದು, ಅರ್ಜಿದಾರರು ವಿಚಾರಿಸಿದಾಗ ಕೇಸ್ ವರ್ಕರ್ ಸಂತೋಷ್ ₹1,500 ಹಾಗೂ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ₹20,000 ಲಂಚ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ದಾಳಿ ಮತ್ತು ಬಂಧನ
ಲಂಚ ಬೇಡಿಕೆಯ ಬಗ್ಗೆ ಸಾಕ್ಷಿ ಸಹಿತ ದೂರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ತಲುಪಿದ ನಂತರ, ಎಸ್ಪಿ ಕುಮಾರಚಂದ್ರ ಅವರ ನೇತೃತ್ವದ ತಂಡ ಬುಧವಾರ ಬಂಟ್ವಾಳದಲ್ಲಿ ಬಲೆಯೊಡ್ಡಿತು. ಬ್ರೋಕರ್ ಗಣೇಶ್ ಮುಖಾಂತರ ₹20,000 ಲಂಚ ಸ್ವೀಕರಿಸುವ ಕ್ಷಣದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ಬಲೆಗೆ ಹಾಕಿದರು.
ಮುಂದಿನ ತನಿಖೆ
ಪ್ರಾಥಮಿಕ ವಿಚಾರಣೆಯಲ್ಲಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಅವರು ಈ ಹಣವನ್ನು ತಹಶೀಲ್ದಾರ್ಗೆ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ. ಹೀಗಾಗಿ, ತಹಶೀಲ್ದಾರ್ ಅವರ ಪಾತ್ರದ ಕುರಿತೂ ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಪ್ರಕರಣದಲ್ಲಿ ಲಂಚ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳು ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…