ಬೆಳಗಾವಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ಗುರುವಾರ ಖಾಸಗಿ ಫೈನಾನ್ಸ್ ಸಿಬ್ಬಂದಿ, ಮನೆ ಸಾಲ ವಸೂಲಿಗಾಗಿ, ಒಂದು ತಿಂಗಳ ಹಸುಗೂಸು ಮತ್ತು ಬಾಣಂತಿ ಮಹಿಳೆ ಸೇರಿ ಇಡೀ ಕುಟುಂಬವನ್ನು ಮನೆಗಳಿಂದ ಹೊರಹಾಕಿ, ಅವರ ಮನೆಗೆ ಬೀಗ ಜಡಿದರು. ಮನೆ ಎದುರು “ಈ ಮನೆ ಹರಾಜಿಗೆ” ಎಂದು ಬರೆದು ಹೂಡಿಕೆದಾರರಿಗೆ ಘೋಷಣೆ ಮಾಡಲಾಯಿತು.
ಗಣಪತಿ ರಾಮಚಂದ್ರ ಲೋಹಾರ್ ಅವರು ಐದು ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ₹5 ಲಕ್ಷ ಸಾಲ ಪಡೆದಿದ್ದರು. ಮೂರು ವರ್ಷಗಳ ಕಾಲ ಸಾಲದ ಕಂತುಗಳನ್ನು ನಿರಂತರವಾಗಿ ಪಾವತಿಸಿದ್ದ ಅವರು, ತಾಯಿಯ ಅನಾರೋಗ್ಯ ಮತ್ತು ಮಗಳ ಹೆರಿಗೆ ಸಂಬಂಧಿಸಿದ ಆರ್ಥಿಕ ತೊಂದರೆಗಳಿಂದಾಗಿ ಕಳೆದ ಆರು ತಿಂಗಳಿನಿಂದ ಕಂತು ಪಾವತಿಸಲು ವಿಫಲರಾದರು.
ಫೈನಾನ್ಸ್ ಸಂಸ್ಥೆಯವರು ನ್ಯಾಯಾಲಯದ ಮೊರೆ ಹೋದ ನಂತರ, ನ್ಯಾಯಾಲಯದ ಆದೇಶದಂತೆ, ಪೊಲೀಸರು ಮತ್ತು ವಕೀಲರ ಸಮ್ಮುಖದಲ್ಲಿ ಲೋಹಾರ್ ಅವರ ಮನೆಯಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದರು. ಮನೆಯಲ್ಲಿದ್ದ ಹಸಿ ಬಾಣಂತಿ, ಹಸುಳೆ, ಹಾಗೂ ವೃದ್ಧೆ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರನ್ನು ಮನೆಯಿಂದ ಹೊರಹಾಕಿ, ಅವರ ಸಾಮಾನುಗಳನ್ನು ಹೊರಗೆ ಎಸೆದು ಬೀಗ ಹಾಕಲಾಯಿತು.
ಕನಿಷ್ಠ ಮಾನವೀಯತೆ ತೋರದೆ ನಡೆದ ಈ ಘಟನೆ, ಬಾಣಂತಿ ಹಾಗೂ ಕುಟುಂಬದ ಇತರರನ್ನು ಬೀದಿಪಾಲು ಮಾಡಿದೆ. ಇಡೀ ದಿನ ಉಪವಾಸದಲ್ಲಿದ್ದ ಕುಟುಂಬದವರು, ಮನೆಯ ಪಕ್ಕದ ಶೆಡ್ನಲ್ಲಿ ಆಶ್ರಯ ಪಡೆದು ಬಿಸಿಲಿನಿಂದ ತಾಳುವಂತೆ ಮಾಡಲಾಯಿತು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಗೊಂಡಿದ್ದ ಬಾಣಂತಿ ತೀವ್ರ ಆಘಾತ ಅನುಭವಿಸಿದ್ದಾರೆ.
ಈ ಘಟನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯ ನಾಗರಿಕರು ಹಾಗೂ ಸಾಮಾಜಿಕ ಸಂಘಟನೆಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…