Latest

ತಾರಿಹಾಳದಲ್ಲಿ ದಾರಿಗೆ ಎಳೆದ ಬಾಣಂತಿ ಕುಟುಂಬ: ಖಾಸಗಿ ಫೈನಾನ್ಸ್‌ ಸಿಬ್ಬಂದಿಯಿಂದ ಮನೆಗೆ ಬೀಗ

ಬೆಳಗಾವಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ಗುರುವಾರ ಖಾಸಗಿ ಫೈನಾನ್ಸ್ ಸಿಬ್ಬಂದಿ, ಮನೆ ಸಾಲ ವಸೂಲಿಗಾಗಿ, ಒಂದು ತಿಂಗಳ ಹಸುಗೂಸು ಮತ್ತು ಬಾಣಂತಿ ಮಹಿಳೆ ಸೇರಿ ಇಡೀ ಕುಟುಂಬವನ್ನು ಮನೆಗಳಿಂದ ಹೊರಹಾಕಿ, ಅವರ ಮನೆಗೆ ಬೀಗ ಜಡಿದರು. ಮನೆ ಎದುರು “ಈ ಮನೆ ಹರಾಜಿಗೆ” ಎಂದು ಬರೆದು ಹೂಡಿಕೆದಾರರಿಗೆ ಘೋಷಣೆ ಮಾಡಲಾಯಿತು.

ಗಣಪತಿ ರಾಮಚಂದ್ರ ಲೋಹಾರ್ ಅವರು ಐದು ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ₹5 ಲಕ್ಷ ಸಾಲ ಪಡೆದಿದ್ದರು. ಮೂರು ವರ್ಷಗಳ ಕಾಲ ಸಾಲದ ಕಂತುಗಳನ್ನು ನಿರಂತರವಾಗಿ ಪಾವತಿಸಿದ್ದ ಅವರು, ತಾಯಿಯ ಅನಾರೋಗ್ಯ ಮತ್ತು ಮಗಳ ಹೆರಿಗೆ ಸಂಬಂಧಿಸಿದ ಆರ್ಥಿಕ ತೊಂದರೆಗಳಿಂದಾಗಿ ಕಳೆದ ಆರು ತಿಂಗಳಿನಿಂದ ಕಂತು ಪಾವತಿಸಲು ವಿಫಲರಾದರು.

ಫೈನಾನ್ಸ್ ಸಂಸ್ಥೆಯವರು ನ್ಯಾಯಾಲಯದ ಮೊರೆ ಹೋದ ನಂತರ, ನ್ಯಾಯಾಲಯದ ಆದೇಶದಂತೆ, ಪೊಲೀಸರು ಮತ್ತು ವಕೀಲರ ಸಮ್ಮುಖದಲ್ಲಿ ಲೋಹಾರ್ ಅವರ ಮನೆಯಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದರು. ಮನೆಯಲ್ಲಿದ್ದ ಹಸಿ ಬಾಣಂತಿ, ಹಸುಳೆ, ಹಾಗೂ ವೃದ್ಧೆ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರನ್ನು ಮನೆಯಿಂದ ಹೊರಹಾಕಿ, ಅವರ ಸಾಮಾನುಗಳನ್ನು ಹೊರಗೆ ಎಸೆದು ಬೀಗ ಹಾಕಲಾಯಿತು.

ಕನಿಷ್ಠ ಮಾನವೀಯತೆ ತೋರದೆ ನಡೆದ ಈ ಘಟನೆ, ಬಾಣಂತಿ ಹಾಗೂ ಕುಟುಂಬದ ಇತರರನ್ನು ಬೀದಿಪಾಲು ಮಾಡಿದೆ. ಇಡೀ ದಿನ ಉಪವಾಸದಲ್ಲಿದ್ದ ಕುಟುಂಬದವರು, ಮನೆಯ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದು ಬಿಸಿಲಿನಿಂದ ತಾಳುವಂತೆ ಮಾಡಲಾಯಿತು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಗೊಂಡಿದ್ದ ಬಾಣಂತಿ ತೀವ್ರ ಆಘಾತ ಅನುಭವಿಸಿದ್ದಾರೆ.

ಈ ಘಟನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯ ನಾಗರಿಕರು ಹಾಗೂ ಸಾಮಾಜಿಕ ಸಂಘಟನೆಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago