Latest

ತಾರಿಹಾಳದಲ್ಲಿ ದಾರಿಗೆ ಎಳೆದ ಬಾಣಂತಿ ಕುಟುಂಬ: ಖಾಸಗಿ ಫೈನಾನ್ಸ್‌ ಸಿಬ್ಬಂದಿಯಿಂದ ಮನೆಗೆ ಬೀಗ

ಬೆಳಗಾವಿ ತಾಲ್ಲೂಕಿನ ತಾರಿಹಾಳ ಗ್ರಾಮದಲ್ಲಿ ಗುರುವಾರ ಖಾಸಗಿ ಫೈನಾನ್ಸ್ ಸಿಬ್ಬಂದಿ, ಮನೆ ಸಾಲ ವಸೂಲಿಗಾಗಿ, ಒಂದು ತಿಂಗಳ ಹಸುಗೂಸು ಮತ್ತು ಬಾಣಂತಿ ಮಹಿಳೆ ಸೇರಿ ಇಡೀ ಕುಟುಂಬವನ್ನು ಮನೆಗಳಿಂದ ಹೊರಹಾಕಿ, ಅವರ ಮನೆಗೆ ಬೀಗ ಜಡಿದರು. ಮನೆ ಎದುರು “ಈ ಮನೆ ಹರಾಜಿಗೆ” ಎಂದು ಬರೆದು ಹೂಡಿಕೆದಾರರಿಗೆ ಘೋಷಣೆ ಮಾಡಲಾಯಿತು.

ಗಣಪತಿ ರಾಮಚಂದ್ರ ಲೋಹಾರ್ ಅವರು ಐದು ವರ್ಷಗಳ ಹಿಂದೆ ಮನೆ ನಿರ್ಮಾಣಕ್ಕಾಗಿ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ₹5 ಲಕ್ಷ ಸಾಲ ಪಡೆದಿದ್ದರು. ಮೂರು ವರ್ಷಗಳ ಕಾಲ ಸಾಲದ ಕಂತುಗಳನ್ನು ನಿರಂತರವಾಗಿ ಪಾವತಿಸಿದ್ದ ಅವರು, ತಾಯಿಯ ಅನಾರೋಗ್ಯ ಮತ್ತು ಮಗಳ ಹೆರಿಗೆ ಸಂಬಂಧಿಸಿದ ಆರ್ಥಿಕ ತೊಂದರೆಗಳಿಂದಾಗಿ ಕಳೆದ ಆರು ತಿಂಗಳಿನಿಂದ ಕಂತು ಪಾವತಿಸಲು ವಿಫಲರಾದರು.

ಫೈನಾನ್ಸ್ ಸಂಸ್ಥೆಯವರು ನ್ಯಾಯಾಲಯದ ಮೊರೆ ಹೋದ ನಂತರ, ನ್ಯಾಯಾಲಯದ ಆದೇಶದಂತೆ, ಪೊಲೀಸರು ಮತ್ತು ವಕೀಲರ ಸಮ್ಮುಖದಲ್ಲಿ ಲೋಹಾರ್ ಅವರ ಮನೆಯಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸಿದರು. ಮನೆಯಲ್ಲಿದ್ದ ಹಸಿ ಬಾಣಂತಿ, ಹಸುಳೆ, ಹಾಗೂ ವೃದ್ಧೆ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರನ್ನು ಮನೆಯಿಂದ ಹೊರಹಾಕಿ, ಅವರ ಸಾಮಾನುಗಳನ್ನು ಹೊರಗೆ ಎಸೆದು ಬೀಗ ಹಾಕಲಾಯಿತು.

ಕನಿಷ್ಠ ಮಾನವೀಯತೆ ತೋರದೆ ನಡೆದ ಈ ಘಟನೆ, ಬಾಣಂತಿ ಹಾಗೂ ಕುಟುಂಬದ ಇತರರನ್ನು ಬೀದಿಪಾಲು ಮಾಡಿದೆ. ಇಡೀ ದಿನ ಉಪವಾಸದಲ್ಲಿದ್ದ ಕುಟುಂಬದವರು, ಮನೆಯ ಪಕ್ಕದ ಶೆಡ್‌ನಲ್ಲಿ ಆಶ್ರಯ ಪಡೆದು ಬಿಸಿಲಿನಿಂದ ತಾಳುವಂತೆ ಮಾಡಲಾಯಿತು. ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆಗೊಂಡಿದ್ದ ಬಾಣಂತಿ ತೀವ್ರ ಆಘಾತ ಅನುಭವಿಸಿದ್ದಾರೆ.

ಈ ಘಟನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯ ನಾಗರಿಕರು ಹಾಗೂ ಸಾಮಾಜಿಕ ಸಂಘಟನೆಗಳ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

nazeer ahamad

Recent Posts

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

1 hour ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

1 hour ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

2 hours ago

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

12 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

12 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

14 hours ago