ಶಂಭುಖನಗರ ಗ್ರಾಮದಲ್ಲಿ ಕಳೆದ 4 ದಿನಗಳಿಂದ ನೀರಿಲ್ಲದೆ ಜನಜೀವನ ಅಸ್ತವ್ಯಸ್ತವಾಗಿದೆ, ಇಷ್ಟಾದರೂ ಈ ಬಗ್ಗೆ ಯಾವುದೇ ಅಧಿಕಾರಿಗಳು, ತಲೆ ಕೆಡಿಸಿಕೊಳ್ಳುತ್ತಿಲ್ಲ, ನಮ್ಮ ಗೋಳು ಕೇಳುವರು ಯಾರು ಎಂದು ಗ್ರಾಮಸ್ಥರು ಸಸಂಭಂದ ಪಟ್ಟ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಹೌದು ವೀಕ್ಷಕರೇ ಇದೇ ಗೌರಿಬಿದನೂರು ತಾಲೂಕಿಗೆ ಸೇರಿದ ಇಡಗೂರು ಗ್ರಾಮ ಪಂಚಾಯತಿಗೆ ಶಂಭುಖ ನಗರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಜನರ ಪರದಾಟ ಆಂಧ್ರಪ್ರದೇಶದ ಚೌಳೂರಿನಿಂದ ಬರುವಂತಹ ಟ್ಯಾಂಕರ್ ನಲ್ಲಿ ಒಂದು ಬಿಂದಿಗೆಗೆ 15 ರೂಗಳಂತೆ ಖರೀದಿಸಿ ಗ್ರಾಮಸ್ಥರು ನೀರು ಕುಡಿಯುವ ಹಾಗಾಗಿದೆ, ಮತ್ತು ಚರಂಡಿ ಸ್ವಚ್ಛತೆ ಮಾಡಿ ಸುಮಾರು ಎರಡು ಮೂರು ವರ್ಷ ಆಗಿದೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ ಮತ್ತು ವಾರ್ಡ್ ನ ಸದಸ್ಯ ಕೂಡ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ವಹಿಸಿಲ್ಲ, ಎಂದು ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಗಳನ್ನು ಕೂಗಿ ಶಂಭುಖ ನಗರದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮಾಡಿ ನೀರಿನ ಬಗ್ಗೆ ಮಾಹಿತಿ ತಿಳಿಸಿದರೆ ನಾನು ರಜೆಯಲ್ಲಿದ್ದೀನಿ, ಇದೀನಿ ನನಗೆ ಹುಷಾರಿಲ್ಲ ಎಂದು ಹೇಳುತ್ತಾರೆ, ಶಂಭುನಗರ ಜನತೆಗೆ ನೀರು ಕೊಡುವುದು ಯಾರು ಮತ್ತು ಚರಂಡಿ ಕ್ಲೀನಿಂಗ್ ಆಗುವುದು ಯಾವಾಗ? ಇಡುಗೂರು ಗ್ರಾಮ ಪಂಚಾಯತಿ ಅಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಕ್ರಮ ವಹಿಸದೆ ಇದ್ದಲ್ಲಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವರದಿ:ಅವಿನಾಶ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…