Latest

ಗೌರಿಬಿದನೂರು ತಾಲ್ಲೂಕಿನ ಇಡಗೂರು ಗ್ರಾಮ ಪಂಚಾಯ ಶಂಭುಖ ನಗರ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳು ಮರೀಚಿಕೆಯಾಗಿವೆ .

ಶಂಭುಖನಗರ ಗ್ರಾಮದಲ್ಲಿ ಕಳೆದ 4 ದಿನಗಳಿಂದ ನೀರಿಲ್ಲದೆ ಜನಜೀವನ ಅಸ್ತವ್ಯಸ್ತವಾಗಿದೆ, ಇಷ್ಟಾದರೂ ಈ ಬಗ್ಗೆ ಯಾವುದೇ ಅಧಿಕಾರಿಗಳು, ತಲೆ ಕೆಡಿಸಿಕೊಳ್ಳುತ್ತಿಲ್ಲ, ನಮ್ಮ ಗೋಳು ಕೇಳುವರು ಯಾರು ಎಂದು ಗ್ರಾಮಸ್ಥರು ಸಸಂಭಂದ ಪಟ್ಟ ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.
ಹೌದು ವೀಕ್ಷಕರೇ ಇದೇ ಗೌರಿಬಿದನೂರು ತಾಲೂಕಿಗೆ ಸೇರಿದ ಇಡಗೂರು ಗ್ರಾಮ ಪಂಚಾಯತಿಗೆ ಶಂಭುಖ ನಗರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೆ ಜನರ ಪರದಾಟ ಆಂಧ್ರಪ್ರದೇಶದ ಚೌಳೂರಿನಿಂದ ಬರುವಂತಹ ಟ್ಯಾಂಕರ್ ನಲ್ಲಿ ಒಂದು ಬಿಂದಿಗೆಗೆ 15 ರೂಗಳಂತೆ ಖರೀದಿಸಿ ಗ್ರಾಮಸ್ಥರು ನೀರು ಕುಡಿಯುವ ಹಾಗಾಗಿದೆ, ಮತ್ತು ಚರಂಡಿ ಸ್ವಚ್ಛತೆ ಮಾಡಿ ಸುಮಾರು ಎರಡು ಮೂರು ವರ್ಷ ಆಗಿದೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಕ್ರಮ ವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ ಮತ್ತು ವಾರ್ಡ್ ನ ಸದಸ್ಯ ಕೂಡ ಇದರ ಬಗ್ಗೆ ಯಾವುದೇ ರೀತಿಯ ಕ್ರಮ ವಹಿಸಿಲ್ಲ, ಎಂದು ಬೇಕೇ ಬೇಕು ನೀರು ಬೇಕು ಎಂದು ಘೋಷಣೆ ಗಳನ್ನು ಕೂಗಿ ಶಂಭುಖ ನಗರದ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೋನ್ ಮಾಡಿ ನೀರಿನ ಬಗ್ಗೆ ಮಾಹಿತಿ ತಿಳಿಸಿದರೆ ನಾನು ರಜೆಯಲ್ಲಿದ್ದೀನಿ, ಇದೀನಿ ನನಗೆ ಹುಷಾರಿಲ್ಲ ಎಂದು  ಹೇಳುತ್ತಾರೆ, ಶಂಭುನಗರ ಜನತೆಗೆ ನೀರು ಕೊಡುವುದು ಯಾರು ಮತ್ತು ಚರಂಡಿ ಕ್ಲೀನಿಂಗ್ ಆಗುವುದು ಯಾವಾಗ? ಇಡುಗೂರು ಗ್ರಾಮ ಪಂಚಾಯತಿ ಅಧಿಕಾರಿಗಳು ಇದರ ಬಗ್ಗೆ ಆದಷ್ಟು ಬೇಗ ಕ್ರಮ ವಹಿಸದೆ ಇದ್ದಲ್ಲಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.  ವರದಿ:ಅವಿನಾಶ್ 

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

3 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

18 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago