ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಘಟನೆ ಬೆಂಗಳೂರಿನ ಸಿ.ವಿ.ರಾಮನ್ ನಗರ ವಿಭಾಗಕ್ಕೆ ಸಂಬಂಧಿಸಿದದ್ದಾಗಿದ್ದು, ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯಪಾಲಕ ಅಭಿಯಂತರ ವಿ. ಯರಪ್ಪ ರೆಡ್ಡಿ ಅವರು, ಒಬ್ಬ ಗುತ್ತಿಗೆದಾರನ ಕಡತ ಫಾರ್ವರ್ಡ್ ಮಾಡಲು 10 ಲಕ್ಷ ರೂ. ಲಂಚವನ್ನು ಬೇಡಿದ್ದರು ಎಂದು ವರದಿಯಾಗಿದೆ.
ಗುತ್ತಿಗೆದಾರನಿಂದ ಲಂಚದ ಮೊತ್ತ ಕೇಳಿದ ಮೇಲೆ, ಆತ ತಕ್ಷಣವೇ ಲೋಕಾಯುಕ್ತ ಇಲಾಖೆಯನ್ನು ಸಂಪರ್ಕಿಸಿದ. ನಂತರ ಪೋಲೀಸರು ಸುಮಾರಿ ಕಾರ್ಯಚರಣೆ ರೂಪಿಸಿ, ನಿಗದಿತ ಸಮಯದಲ್ಲಿ ಹಣ ಹಸ್ತಾಂತರವಾಗುತ್ತಿದ್ದಾಗಲೇ ದಾಳಿ ನಡೆಸಿದರು.
ಈ ದಾಳಿಯಲ್ಲಿ ಯರಪ್ಪ ರೆಡ್ಡಿಯನ್ನು ಲಂಚದ ಹಣದೊಂದಿಗೆ ಬಂಧಿಸಲಾಗಿದ್ದು, ಅವರ ವಿರುದ್ಧ ಫಿರ್ಯಾದು ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಲೋಕಾಯುಕ್ತರಿಂದ ಈ ಕಾರ್ಯಾಚರಣೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭ್ರಷ್ಟಾಚಾರದ ವಿರುದ್ಧದ ನಂಬಿಕೆಯನ್ನು ಮತ್ತೊಮ್ಮೆ ಬಲಪಡಿಸಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…