ಉದಯಪುರ, ಜುಲೈ 26: ಉದಯಪುರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ದುರ್ಘಟನೆಯೊಂದು ಆತಂಕ ಉಂಟುಮಾಡಿದೆ. ಜಮ್ಮು ಮತ್ತು ಕಾಶ್ಮೀರ ಮೂಲದ ಅಂತಿಮ ವರ್ಷದ ಬಿಡಿಎಸ್ (ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ) ವಿದ್ಯಾರ್ಥಿನಿ ಶ್ವೇತಾ ಸಿಂಗ್ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಶ್ವೇತಾ ಅವರ ರೂಮ್ಮೇಟ್ ಘಟನೆ ಗಮನಿಸಿ ತಕ್ಷಣ ಹಾಸ್ಟೆಲ್ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶ್ವೇತಾ ಶವವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ಕುಟುಂಬ ಸದಸ್ಯರು ಆಗಮಿಸಿದ ನಂತರ ಮಾತ್ರ ನಡೆಯಲಿದೆ ಎಂದು ಸುಖೇರ್ ಪೊಲೀಸ್ ಠಾಣೆಯ ಎಸ್ಎಚ್ಒ ರವೀಂದ್ರ ಚರಣ್ ಹೇಳಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪತ್ತೆಯಾದ ಆತ್ಮಹತ್ಯೆ ಪತ್ರದಲ್ಲಿ, ಶ್ವೇತಾ ಕೆಲ ಅಧ್ಯಾಪಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರ್ದಿಷ್ಟವಾಗಿ ಪರೀಕ್ಷೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದಿರುವುದು ಹಾಗೂ ಅಧ್ಯಾಪಕರಿಂದ ನಿತ್ಯಕಾಲ ಮಾನಸಿಕ ಕಿರುಕುಳ ಅನುಭವಿಸುತ್ತಿರುವುದಾಗಿ ಆಕೆ ತಮ್ಮ ಜೀವನಾಂತ್ಯದ ಪತ್ರದಲ್ಲಿ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶ್ವೇತಾ ಆತ್ಮಹತ್ಯೆ ಹಿನ್ನೆಲೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕಾಲೇಜು ಮುಂಭಾಗ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಇಳಿದಿದ್ದಾರೆ. ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಕಾಲೇಜು ನಿರ್ದೇಶಕರು ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡಿ, ಆತ್ಮಹತ್ಯೆ ಪತ್ರದಲ್ಲಿ ಹೆಸರಿತ ಅಧ್ಯಾಪಕರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾಲೇಜು ಆಡಳಿತ ಮಂಡಳಿಯ ಪ್ರಕಾರ, ಆರೋಪದ ಅಧ್ಯಾಪಕರನ್ನು ತಾತ್ಕಾಲಿಕವಾಗಿ ಕೆಲಸದಿಂದ ಅಮಾನತುಗೊಳಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಒತ್ತಡರಹಿತ ಶೈಕ್ಷಣಿಕ ವಾತಾವರಣ ಒದಗಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಶ್ವೇತಾ ಸಿಂಗ್ ಆತ್ಮಹತ್ಯೆ ಹಿನ್ನೆಲೆ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಯುವ ಒತ್ತಡ ಮತ್ತು ಕಿರುಕುಳದ ವಿರುದ್ಧ ಗಂಭೀರ ಚರ್ಚೆ ಆರಂಭವಾಗುವ ಸಾಧ್ಯತೆ ಇದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…