Latest

ವಾಟ್ಸಪ್ ಬಳಸುವರೇ ಜಾಗ್ರತೆ.. ಹ್ಯಾಕರ್ಸ್ ಕಾಟ ಆರಂಭ..!

ಬೆಂಗಳೂರು: ಇತ್ತೀಚೆಗೆ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹ್ಯಾಕಿಂಗ್‌ ಪ್ರಕರಣಗಳು ಹೆಚ್ಚಾಗಿವೆ, ಮತ್ತು ಇದೀಗ ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಾಪ್‌ಗೂ ಹ್ಯಾಕಿಂಗ್ ವೈರಸ್‌ನ ಕಾಟ ಶುರುವಾಗಿದೆ.
ವಾಟ್ಸಾಪ್ ಖಾತೆಗಳನ್ನು ಹ್ಯಾಕ್ ಮಾಡುವ ಹೊಸ ತಂತ್ರಾಂಶವು ಪೋಸ್ಟ್‌ಗಳಲ್ಲಿ ಭಯ ಹುಟ್ಟಿಸಿದೆ. ಈ ತಂತ್ರಾಂಶವನ್ನು ಎಪಿಕೆ ಫೈಲ್‌ಗಳ ಮೂಲಕ ಹ್ಯಾಕರ್ಸ್‌ಗಳು ಮೊಬೈಲ್‌ಗಳ ಸಂಪೂರ್ಣ ನಿಯಂತ್ರಣವನ್ನು ಪಡೆದು, ವೈಯಕ್ತಿಕ ಮಾಹಿತಿಯನ್ನು ದೋಚಬಹುದು. ಇದೇ ಕಾರಣಕ್ಕಾಗಿ ಪೊಲೀಸರು ಎಪಿಕೆ ಫೈಲ್‌ಗಳನ್ನು ಯಾವುದೇ ರೀತಿಯಲ್ಲಿ ಕ್ಲಿಕ್ ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಸಲಿಯಲ್ಲಿಯೂ, ಈ ತಂತ್ರಾಂಶವು ಪ್ಲೇ ಸ್ಟೋರ್‌ನಲ್ಲಿಯೇ ಲಭ್ಯವಿದ್ದು, ಸೈಬರ್ ಕಳ್ಳರು ಇದನ್ನು ಕಸ್ಟಮೈಸ್ ಮಾಡಿ ವಾಟ್ಸಾಪ್‌ ಮೂಲಕ ಹರಡಿಸುತ್ತಿದ್ದಾರೆ. ಇದು ಹಳೆಯ ತಂತ್ರಜ್ಞಾನವಾದರೂ, ಇದನ್ನ ಕ್ಲಿಕ್ ಮಾಡಿದಾಕ್ಷಣ ಹ್ಯಾಕರ್ಸ್‌ ಗಳಿಗೆ ಎಲ್ಲಾ ಮಾಹಿತಿಯನ್ನು ಲಭ್ಯವಾಗಿಸಲು ಸಹಾಯ ಮಾಡುತ್ತದೆ.
ಆದಕಾರಣ, ನೀವು ಎಪಿಕೆ ಫೈಲ್‌ ಕ್ಲಿಕ್ ಮಾಡಿದರೆ, ಕೂಡಲೇ ಅದನ್ನು ಡಿಲೀಟ್‌ ಮಾಡಿ, ನಿಮ್ಮ ಮೊಬೈಲ್‌ನಲ್ಲಿರುವ ಬ್ಯಾಂಕ್ ಪಾಸ್‌ವರ್ಡ್, ಮೊಬೈಲ್ ಪಾಸ್‌ವರ್ಡ್, ಇಮೇಲ್, ಮತ್ತು ಯುಪಿಐ ಪಾಸ್‌ವರ್ಡ್‌ಗಳನ್ನು ಕೂಡಲೇ ಬದಲಾಯಿಸಲು ಸೈಬರ್ ಪೊಲೀಸ್‌ಗಳು ಸಲಹೆ ನೀಡಿದ್ದಾರೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

59 minutes ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 hour ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

1 hour ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

21 hours ago