Crime

ಪತಿಯನ್ನು ಕೊಂದ ಬ್ಯೂಟಿ ಪಾರ್ಲರ್ ಆಂಟಿ ಅಪಘಾತವೆಂದು ಬಿಂಬಿಸಲು ಯತ್ನ..!

ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಪತ್ನಿಯೇ ತನ್ನ ಪತಿಯನ್ನು ಭೀಕರವಾಗಿ ಹತ್ಯೆ ಮಾಡಿ, ಅಪಘಾತವೆಂದು ತೋರ್ಪಡಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಮುಂಡಗೋಡ ತಾಲ್ಲೂಕಿನ ಮೂಲದ ಮಂಜುನಾಥ ಶಿವಪ್ಪ ಜಾದವ್ (45) ಆಗಿದ್ದು, ಧಾರವಾಡದಲ್ಲಿ ಹತ್ಯೆಗೈದು, ಶವವನ್ನು ಬಂಕಾಪುರದಲ್ಲಿ ಎಸೆದು ಹೋಗಲಾಗಿದೆ.

ಮೂರನೇ ಪತ್ನಿಯ ಪಾತಕ ಕೃತ್ಯ

ಮಂಜುನಾಥ ಜಾದವ್ ಅವರನ್ನು ಅವರ ಮೂರನೇ ಪತ್ನಿ ಮದು ಮತ್ತು ಆಕೆಯ ಮಕ್ಕಳಾದ ವಿನಯ್ ಹಾಗೂ ವಿಕಾಸ್ ಸೇರಿ ಹತ್ಯೆಗೈದಿದ್ದಾರೆ. ಮದು ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು, ಮತ್ತು ಮಂಜುನಾಥನೇ ಆಕೆಗೆ ಇದನ್ನು ಸ್ಥಾಪಿಸಿಕೊಟ್ಟಿದ್ದ. ಆದರೆ, ಅನೈತಿಕ ಸಂಬಂಧದ ಅನುಮಾನದಿಂದ ಈ ಕೊಲೆ ನಡೆದಿದೆ.

ಸಿನಿಮಾ ಶೈಲಿಯ ಹತ್ಯೆ

ಪತ್ನಿ ಮತ್ತು ಆಕೆಯ ಮಕ್ಕಳ ಪ್ಲಾನ್ ಪ್ರಕಾರ, ಮಂಜುನಾಥ ಅವರನ್ನು ಧಾರವಾಡದಲ್ಲಿ ಬರ್ಬರವಾಗಿ ಹತ್ಯೆಗೈದು, ಬಳಿಕ ಶವವನ್ನು ಕಾರಿನಲ್ಲಿ ಬಂಕಾಪುರಕ್ಕೆ ಕರೆದೊಯ್ದು ಎಸೆದು ತಲೆಮರೆಸಿಕೊಳ್ಳಲು ಯತ್ನಿಸಲಾಗಿದೆ.

ಸಿಸಿಟಿವಿ ವಿಚಾರಕ್ಕೆ ಗಲಾಟೆ, ಕೊನೆಯಾಗಿ ಹತ್ಯೆ

ಮದುವೆಯಾದ ಬಳಿಕ, ಮದು ಮತ್ತೊಬ್ಬ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂಬ ಶಂಕೆಯಿಂದ, ಮಂಜುನಾಥ ತನ್ನ ಪತ್ನಿಯ ಮನೆಯ ಬಳಿ ಸಿಸಿಟಿವಿ ಅಳವಡಿಸಿದ್ದ. ಇದರಿಂದ ಇಬ್ಬರ ನಡುವೆ ಭಾರಿ ವಾಗ್ವಾದ ನಡೆದಿದ್ದು, ಕೊನೆಗೂ ಪತ್ನಿ ಹತ್ಯೆಗೆ ಕೈ ಹಾಕಿದ್ದಾಳೆ.

ಶವ ಹಸ್ತಾಂತರಿಸಿ ಅಪಘಾತವೆಂದು ತೋರ್ಪಡಿಸಲು ಯತ್ನ

ಶನಿವಾರ, ಮದು ತನ್ನ ಪತಿಯ ಮೇಲೆ ಹಲ್ಲೆ ನಡೆಸಿ, ಅದೇ ಮನೆಯಲ್ಲಿ ಬರ್ಬರವಾಗಿ ಕೊಲೆಗೈದು, ಕಾರಿನಲ್ಲಿ ಶವವನ್ನು ಸಾಗಿಸಿ ಬಂಕಾಪುರ ಹೊರವಲಯದಲ್ಲಿ ಎಸೆದು ಹೋಗಿದ್ದಾಳೆ. ಬಳಿಕ, ಇದನ್ನು ಅಪಘಾತವೆಂದು ತೋರ್ಪಡಿಸಲು ಯೋಜನೆ ಹಾಕಿಕೊಂಡಿದ್ದರೂ, ಪೊಲೀಸ್ ವಿಚಾರಣೆ ವೇಳೆ ಪತ್ನಿ ಮದು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾಳೆ.

ಈ ಘಟನೆಯ ಸಂಬಂಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನ ಪ್ರಕ್ರಿಯೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago