ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದಲ್ಲಿ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ, ಕೈ ಹಾಗೂ ಕಾಲುಗಳು ಕತ್ತರಿ ಹಾಕಿದ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಶವದ ಭಾಗಗಳು ಪತ್ತೆಯಾಗಿದೆ.
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಈ ಶವದ ಅಸ್ಥಿಪಂಜರವನ್ನು ಸ್ಥಳೀಯರು ಇಂದು ಬೆಳಗ್ಗೆ ಕಾಣಿಸಿಕೊಂಡು ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವದ ಸ್ಥಿತಿಗತಿ ನೋಡುವಾಗಲೇ ಇದು ಸಂಶಯಾಸ್ಪದ ಮರಣ ಎಂಬುದು ಸ್ಪಷ್ಟವಾಗಿದೆ.
ಮಾಹಿತಿ ಪಡೆದ ಕೂಡಲೇ ಮೈಸೂರು ಜಿಲ್ಲೆಯ ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಹಾಗೂ ಬಿಳಿಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪೂಜಾ ಮತ್ತು ಇತರ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆಗಾಗಿ ಸ್ಥಳದ ಸುತ್ತಮುತ್ತ ಸಿಸಿಟಿವಿ ಫುಟೇಜ್ಗಳನ್ನು ಪರಿಶೀಲಿಸುವ ಕೆಲಸವೂ ಆರಂಭವಾಗಿದೆ.
ಮೃತ ವ್ಯಕ್ತಿಯ ಗುರುತು ಇಲ್ಲದ ಕಾರಣದಿಂದಾಗಿ ಪೊಲೀಸರು ಈಗ ಶವದ ಗುರುತು ಹಿಡಿಯಲು ಸಾರ್ವಜನಿಕರ ಸಹಾಯ ಬೇಡುತ್ತಿದ್ದಾರೆ. ಶವದ ಇತರೆ ಅಂಗಾಂಗಗಳು ಇನ್ನೂ ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆ ಹಿನ್ನೆಲೆಯಲ್ಲಿ ಶವವನ್ನು ಚೂರುಚೂರು ಮಾಡಿರುವ ಶಂಕೆಯಿದ್ದು, ಇದನ್ನು ಆಧಾರವಿಟ್ಟು ಪೊಲೀಸರು ಕೃತ್ಯಕ್ಕೆ ಸಂಬಂಧಿಸಿದ ಸುಳಿವು ಹುಡುಕುತ್ತಿದ್ದಾರೆ.
ಈ ಘಟನೆ ಕುರಿತಂತೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಜೋರಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…