Latest

ಬೆಳಗಾವಿ ಕಾಂಗ್ರೆಸ್ ಸಮಾವೇಶದ ಗೊಂದಲ ಪ್ರಕರಣ: ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಅಮಾನತು

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ವೇಳೆ ಉಂಟಾದ ಗೊಂದಲ ಸಂಬಂಧ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತು ಮಾಡಿ ಕ್ರಮ ಜರುಗಿಸಲಾಗಿದೆ.

ಸೋಮವಾರ ನಡೆದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ನಡೆಸುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯೊಂದು ವೇದಿಕೆಯತ್ತ ನುಗ್ಗಿ ಪ್ರತಿಭಟನೆಗೆ ಮುಂದಾಗಿದ್ದಳು. ಈ ಹಿನ್ನಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಈ ಘಟನೆ ವೇಳೆ ಪೊಲೀಸರು ಸೂಕ್ತ ರೀತಿಯಲ್ಲಿ ತಕ್ಷಣ ಸ್ಪಂದಿಸದೆ ಕರ್ತವ್ಯ ಲೋಪ ಮಾಡಿಕೊಂಡಿದ್ದಾರೆಂಬ ಆರೋಪದ ಮೇರೆಗೆ ಖಡೇಬಜಾರ್ ಠಾಣೆಗೆ ಸೇರಿದ ಕಾನ್‌ಸ್ಟೇಬಲ್ ಬಿ.ಎ. ನೌಕುಡಿ ಮತ್ತು ಕ್ಯಾಂಪ್ ಠಾಣೆಯ ಕಾನ್‌ಸ್ಟೇಬಲ್ ಮಲ್ಲಪ್ಪ ಹಡಗಿನಾಳರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಥೋಡ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಸಮಾರಂಭದ ವೇಳೆ ಶಿಸ್ತು ಕಾಯ್ದುಕೊಳ್ಳಲು ಜವಾಬ್ದಾರಿಯಾದ ಪೊಲೀಸರು ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲರಾದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದರಿಂದ ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಪೊಲೀಸರು ತಮ್ಮ ಕರ್ತವ್ಯಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂಬ ಸಂದೇಶ ನೀಡಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago