Crime

ಮನೆಗೆ ಕರೆದುಕೊಂಡು ಹೋಗು ಎಂದ ಪ್ರೇಯಸಿಯ ಪ್ರಾಣ ತೆಗೆದ ಪ್ರಿಯತಮ!

ತೀರ್ಥಹಳ್ಳಿಯಲ್ಲಿ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿರುವ ಸೃಜನ್ ಆಗಾಗ​ ಕೊಪ್ಪಗೆ ಹಣ ವಸೂಲಿಗೆಂದು ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ಓದುತ್ತಿದ್ದ ಸೌಮ್ಯಾಳ ಪರಿಚಯವಾಗಿದೆ. ಈ ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿದೆ. ಆದರೆ ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದಾರೆ. ಇತ್ತ ಸೌಮ್ಯ ತಮ್ಮ ಪೋಷಕರ ಬಳಿ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಜುಲೈ 2 ರಂದು‌ ಹೊರಟಿದ್ದಾಳೆ. ಅಂತೆಯೇ ತೀರ್ಥಹಳ್ಳಿಗೆ ಬಂದ ಸೌಮ್ಯಾ ತನ್ನ ಪ್ರಿಯತಮನನ್ನು ಭೇಟಿಯಾಗಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ಒತ್ತಾಯಿಸಿದ್ದಾಳೆ. ಈ ವೇಳೆ ಸೃಜನ್‌, ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾನೆ.
ಆದರೆ ಸೃಜನ್‌ ಮಾತನ್ನು ಕೇಳದ ಸೌಮ್ಯಾ ಮತ್ತೆ ಆತನನ್ನು ಪೀಡಿಸಿದ್ದಾಳೆ. ಹೀಗಾಗಿ ಸೃಜನ್‌ ಆಕೆಯನ್ನು ಸಮಾಧಾನಪಡಿಸಲೆಂದು ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದಿದ್ದಾನೆ. ತನ್ನನ್ನು ಸೃಜನ್‌ ಮದುವೆ ಆಗಲ್ಲವೆಂದು ಅನುಮಾನ ವ್ಯಕ್ತಪಡಿಸಿದ್ದಾಳೆ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರೊಚ್ಚಿಗೆದ್ದ ಸೃಜನ್‌, ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಹಿಸುಕಿದ್ದು, ಪರಿಣಾಮ ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ. ಇನ್ನು ಸೌಮ್ಯಾ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡ ಸೃಜನ್‌ ಗಾಬರಿಯಾಗಿದ್ದಾನೆ. ಅಲ್ಲದೇ ಕೂಡಲೇ ಶವವನ್ನು ಮುಂಬಾಳು ಬಳಿ ಹೂತಿಟ್ಟಿದ್ದಾನೆ. ಇತ್ತ ತೀರ್ಥಹಳ್ಳಿಗೆ ಹೋದ ಸೌಮ್ಯಾ ವಾಪಸ್‌ ಬರದೇ ಇರುವುದರಿಂದ ಆಕೆಯ ಪೋಷಕರು ಆತಂಕಗೊಂಡು ಕೊಪ್ಪ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದಾರೆ. ಈ ವೇಳೆ ಸೃಜನ್‌ ಬಣ್ಣ ಬಯಲಾಗಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago