ಬೆಂಗಳೂರು ನಗರದಲ್ಲಿ ಮತ್ತೊಂದು ಪತ್ನಿ ಹತ್ಯೆಯ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಶಾಪಿಂಗ್ಗೆ ಹೋಗಿದ್ದಂತೆಯೇ ಗಲಾಟೆಗೆ ಕಾರಣವಾಯಿತು ಎನ್ನಲಾದ ಪತಿ, ತನ್ನ ಪತ್ನಿಯನ್ನು ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಪ್ರಕರಣ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಯ ಮಹಿಳೆಯನ್ನು ಪದ್ಮಜಾ (29) ಎಂದು ಗುರುತಿಸಲಾಗಿದ್ದು, ಪತಿ ಹರೀಶ್ ಅವರೇ ಈ ಕೃತ್ಯ ಎಸಗಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಂಪತಿಗಳು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ದಂಪತಿಗಳು ಇಬ್ಬರೂ ಇಂಜಿನಿಯರಿಂಗ್ ಪದವಿ ಪಡೆದಿದ್ದರೆನ್ನಲಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹರೀಶ್ ಕೆಲಸದಿಂದ ಬಿಡುವು ಪಡೆದು ಮನೆಯಲ್ಲಿಯೇ ಇದ್ದು, ಪತ್ನಿ ಪದ್ಮಜಾ ಮಾತ್ರ ಉದ್ಯೋಗಿಯಾಗಿದ್ದರು. ಈ ಹಿನ್ನೆಲೆಯಲ್ಲಿ ದಿನೇದಿನೆ ದಂಪತಿಗಳ ನಡುವೆ ಗಲಾಟೆಗಳು ನಡೆದುಕೊಂಡು ಬರುತ್ತಿದ್ದವು.
ಘಟನೆ ನಡೆಯದ ಹಿಂದೆ ಶಾಪಿಂಗ್ ಕಾರಣ ಎನ್ನಲಾಗಿದೆ. ಪದ್ಮಜಾ ಶಾಪಿಂಗ್ಗೆ ಹೋಗಿ ಬಂದ ಬಳಿಕ ಹರೀಶ್ ಅವರು ತೀವ್ರವಾಗಿ ವಾಗ್ವಾದಕ್ಕೆ ಇಳಿದಿದ್ದು, ಆಕ್ರೋಶದಿಂದ ಪತ್ನಿಯ ಕುತ್ತಿಗೆ ಹಿಸುಕಿ, ಬಳಿಕ ಕಾಲಿನಿಂದ ತುಳಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಹರೀಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಬದುಕಿನಲ್ಲಿ ನಂಬಲಾಗದ ಸಾವು ಬರೆದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…