ಬೆಂಗಳೂರು ನಗರದಲ್ಲಿ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಬೆಳವಣಿಗೆ ಕಂಡಿದೆ. ಕೆಐಎಡಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ವೆ ಮೇಲ್ವಿಚಾರಕ (ಸೂಪರ್ ವೈಸರ್) ನರೇಂದ್ರ ಕುಮಾರ್, ಅನುಮೋದನೆಗಾಗಿ 1.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ರವಿ ಎಂಬ ವ್ಯಕ್ತಿ, ಬೆಂಗಳೂರು ಪ್ರದೇಶದ ಕೆಐಎಡಿಬಿಗೆ ತನ್ನ ಸ್ಕೆಚ್ ಸಲ್ಲಿಸಿದ್ದರು. ಅರ್ಜಿಗೆ ಅನುಮೋದನೆ ನೀಡುವ ಬಗ್ಗೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ, ನರೇಂದ್ರ ಕುಮಾರ್ 1.50 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಲಂಚದ ಒತ್ತಡಕ್ಕೆ ಗುರಿಯಾದ ರವಿ, ತಕ್ಷಣವೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.
ಈ ದೂರಿನ ಹಿನ್ನೆಲೆಯಲ್ಲಿ, ಲೋಕಾಯುಕ್ತ ಎಸ್ಪಿ ಡಾ. ವಂಶಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಿಐ ಅನೀಲ್ ಕುಮಾರ್, ಪ್ರಶಾಂತ್ ಹಾಗೂ ಅಂಜನ್ ಕುಮಾರ್ ನೇತೃತ್ವದ ವಿಶೇಷ ತಂಡದ ಪೊಲೀಸರು ನಿಗದಿತ ಸಮಯದಲ್ಲಿ ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ನರೇಂದ್ರ ಕುಮಾರ್ ಅವರನ್ನು ಬಲೆಗೆಳ್ಳಿದರು.
ಪ್ರಸ್ತುತ ಆರೋಪಿಯನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಹಂತದ ತನಿಖೆ ಮುಂದುವರೆಸಿದ್ದಾರೆ. ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ಭಯ ಹುಟ್ಟಿಸುತ್ತಿದ್ದ ರೌಡಿಶಾಹಿಗೆ ಕಡಿವಾಣ ಹಾಕಲು ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳು ಇದೀಗ ಗಂಭೀರ ರೂಪ ಪಡೆದಿವೆ.ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧದ ಪ್ರಮಾಣ…
ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಯಾನಕ ಬಸ್ ಅಪಘಾತದಲ್ಲಿ 23 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ವಾಯುವ್ಯ…
ಉಡುಪಿ, ಜೂನ್ 6: ಟ್ರೇಡಿಂಗ್ನಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂಬ ಆಮಿಷ ನೀಡಿ ಯುವತಿಯನ್ನು ಲಕ್ಷಾಂತರ ರೂ. ವಂಚಿಸಿರುವ ಘಟನೆ…
ಬೆಂಗಳೂರು, ಜೂನ್ 7: ಬೆಂಗಳೂರು ಹೊರವಲಯದ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮೇ 21 ರಂದು ಪತ್ತೆಯಾಗಿದ್ದ ಬಾಲಕಿಯ ಹತ್ಯೆ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಪೊಲೀಸರು ಹೊಣೆ ಎಂಬ ಸರ್ಕಾರಿ ನಿರ್ಧಾರದ ವಿರುದ್ಧ ಪೊಲೀಸ್ ಇಲಾಖೆ ಒಳಗೆ…
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದರೆಂಬ ಶಂಕೆಯಿಂದ ತಮ್ಮ ಕುಟುಂಬದವರನ್ನು ವಿಷವಿಟ್ಟು ಕೊಲ್ಲಲು ಯತ್ನಿಸಿದ…