Latest

ಲಾಭಕ್ಕಿಂತ ಹೊರೆಯೇ ಹೆಚ್ಚು, ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರಿನ ಜನರ ಆಕ್ರೋಶ

ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಾಗಿರುವುದರಿಂದ ಜನರು ತೊಂದರೆಗೆ ಸಿಲುಕಿದ್ದು, ಅದಕ್ಕೆ ಮತ್ತೊಂದು ಹೊಸ ಭಾರವಾಗಿ ಈ ವ್ಯವಸ್ಥೆ ಪರಿಚಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ
ಇಂಧನ ಇಲಾಖೆಯ ತೀರ್ಮಾನದಂತೆ, ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು 2024ರ ಮಾರ್ಚ್ 6ರಂದು ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರುವ ಕೆಲಸ ನಡೆದಿದೆ.

ಸ್ಮಾರ್ಟ್ ಮೀಟರ್: ಲೂಟಿಯ ಹೊಸ ರೂಪವೆ?
ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾದ ಪ್ರಮುಖ ಅಂಶವೇ, ಈ ಸ್ಮಾರ್ಟ್ ಮೀಟರ್ ನಿರ್ವಹಣೆಗೂ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಬೇಕಾದ ಅಗತ್ಯ. ಪ್ರತಿ ತಿಂಗಳು ನಿಗದಿತ ವಿದ್ಯುತ್ ಶುಲ್ಕದ ಜೊತೆಗೆ, ₹75 ರಿಂದ ₹118 ವರೆಗೆ ಹೆಚ್ಚುವರಿ ಹಣ ಭರಿಸಬೇಕಾಗಿದೆ. ಈ ಕ್ರಮ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಇದನ್ನು “ಲೂಟಿಯ ಹೊಸ ವಿಧಾನ” ಎಂದು ಕೆಲವರು ಟೀಕಿಸುತ್ತಿದ್ದಾರೆ.

ಒಂದು ಕೈಯಲ್ಲಿ ಸಬ್ಸಿಡಿ, ಇನ್ನೊಂದು ಕೈಯಲ್ಲಿ ಲೂಟಿ?
ಸರ್ಕಾರ ಗೃಹಜ್ಯೋತಿ ಯೋಜನೆ ಮೂಲಕ ಉಚಿತ ವಿದ್ಯುತ್ ನೀಡಿದರೆ, ಮತ್ತೊಂದೆಡೆ ಈ ರೀತಿಯ ಹೊಸ ತೆರಿಗೆಗಳ ಮೂಲಕ ಹಣ ವಸೂಲಿ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಫಿಕ್ಸ್ಡ್ ಚಾರ್ಜ್ ಮಾತ್ರವಲ್ಲದೆ, ಈಗ ನಿರ್ವಹಣಾ ಶುಲ್ಕವೂ ಗ್ರಾಹಕರ ಮೇಲಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಮಾರ್ಟ್ ಮೀಟರ್ ಅನಿವಾರ್ಯವೋ? ಅಥವಾ ಗ್ರಾಹಕರ ಒಪ್ಪಿಗೆ ಆಧಾರಿತವಾಗಿರಬಹುದೋ? ಎಂಬ ಪ್ರಶ್ನೆಗಳು ಮುಂದುವರೆದಿದ್ದು, ಈ ಕುರಿತು ಸರ್ಕಾರ ಇನ್ನೂ ಸ್ಪಷ್ಟನೆ ನೀಡಿಲ್ಲ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

11 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

11 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago