ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಾಗಿರುವುದರಿಂದ ಜನರು ತೊಂದರೆಗೆ ಸಿಲುಕಿದ್ದು, ಅದಕ್ಕೆ ಮತ್ತೊಂದು ಹೊಸ ಭಾರವಾಗಿ ಈ ವ್ಯವಸ್ಥೆ ಪರಿಚಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ
ಇಂಧನ ಇಲಾಖೆಯ ತೀರ್ಮಾನದಂತೆ, ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸಲು ನಿರ್ಧರಿಸಲಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು 2024ರ ಮಾರ್ಚ್ 6ರಂದು ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಹಂತ ಹಂತವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರುವ ಕೆಲಸ ನಡೆದಿದೆ.
ಸ್ಮಾರ್ಟ್ ಮೀಟರ್: ಲೂಟಿಯ ಹೊಸ ರೂಪವೆ?
ಜನಸಾಮಾನ್ಯರ ಆಕ್ರೋಶಕ್ಕೆ ಕಾರಣವಾದ ಪ್ರಮುಖ ಅಂಶವೇ, ಈ ಸ್ಮಾರ್ಟ್ ಮೀಟರ್ ನಿರ್ವಹಣೆಗೂ ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡಬೇಕಾದ ಅಗತ್ಯ. ಪ್ರತಿ ತಿಂಗಳು ನಿಗದಿತ ವಿದ್ಯುತ್ ಶುಲ್ಕದ ಜೊತೆಗೆ, ₹75 ರಿಂದ ₹118 ವರೆಗೆ ಹೆಚ್ಚುವರಿ ಹಣ ಭರಿಸಬೇಕಾಗಿದೆ. ಈ ಕ್ರಮ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ಇದನ್ನು “ಲೂಟಿಯ ಹೊಸ ವಿಧಾನ” ಎಂದು ಕೆಲವರು ಟೀಕಿಸುತ್ತಿದ್ದಾರೆ.
ಒಂದು ಕೈಯಲ್ಲಿ ಸಬ್ಸಿಡಿ, ಇನ್ನೊಂದು ಕೈಯಲ್ಲಿ ಲೂಟಿ?
ಸರ್ಕಾರ ಗೃಹಜ್ಯೋತಿ ಯೋಜನೆ ಮೂಲಕ ಉಚಿತ ವಿದ್ಯುತ್ ನೀಡಿದರೆ, ಮತ್ತೊಂದೆಡೆ ಈ ರೀತಿಯ ಹೊಸ ತೆರಿಗೆಗಳ ಮೂಲಕ ಹಣ ವಸೂಲಿ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಫಿಕ್ಸ್ಡ್ ಚಾರ್ಜ್ ಮಾತ್ರವಲ್ಲದೆ, ಈಗ ನಿರ್ವಹಣಾ ಶುಲ್ಕವೂ ಗ್ರಾಹಕರ ಮೇಲಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಮಾರ್ಟ್ ಮೀಟರ್ ಅನಿವಾರ್ಯವೋ? ಅಥವಾ ಗ್ರಾಹಕರ ಒಪ್ಪಿಗೆ ಆಧಾರಿತವಾಗಿರಬಹುದೋ? ಎಂಬ ಪ್ರಶ್ನೆಗಳು ಮುಂದುವರೆದಿದ್ದು, ಈ ಕುರಿತು ಸರ್ಕಾರ ಇನ್ನೂ ಸ್ಪಷ್ಟನೆ ನೀಡಿಲ್ಲ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…