ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬವೊಂದು ಬಾಗಿದ್ದು ಧರೆಗುರುಳುವ ಹಂತದಲ್ಲಿದೆ. ಚಿಗಳ್ಳಿ ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಹತ್ತಿರ ಮೂಡಸಾಲಿ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿರುವ ವಿದ್ಯುತ್ ಕಂಬವು ನೆಲಕ್ಕುರುವ ಹಂತದಲ್ಲಿದ್ದು ಸಂಬಂಧಿಸಿದ ಹೆಸ್ಕಾಂ ಸಿಬ್ಬಂದಿಗಳು ಆದಷ್ಟು ಬೇಗ ಈ ವಿದ್ಯುತ್ ಕಂಬವನ್ನು ನೆಲಕ್ಕೆ ಬೀಳುವ ಮುಂಚೆಯೇ ಸರಿಪಡಿಸಬೇಕು ಇಲ್ಲವಾದಲ್ಲಿ ಆ ಕಂಬದ ಜೊತೆಗೆ ಮತ್ತೆ ಮೂರು ಕಂಬಗಳು ಸಹ ಅದರ ಜೊತೆಗೆ ನೆಲಕ್ಕುರುಳಬಹುದು.
ಈ ವಿದ್ಯುತ್ ಕಂಬವು ರಸ್ತೆಯ ಪಕ್ಕದಲ್ಲಿರುವುದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಥವಾ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ ತೊಂದರೆ ಉಂಟಾಗಬಹುದು ಜೊತೆಗೆ ವಿದ್ಯುತ್ ಕಂಬ ಬೀಳುವುದಕ್ಕಿಂತ ಮುಂಚೆ ಇನ್ನೂ ಸ್ವಲ್ಪ ಬಾಗಿದರೆ ರಸ್ತೆಯ ಇನ್ನೊಂದು ಬದಿಗಿರುವ ಬೃಹತ್ ಆಲದ ಮರಕ್ಕೆ ತಾಗಿ ಪಕ್ಕದಲ್ಲಿರುವ ಮನೆಗೂ ಸಹ ಹಾನಿಯಾಗಬಹುದು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…