ಬೆಂಗಳೂರು: ಮಾಲೀಕನ ಮನೆಯಿಂದ ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವಿಗೆ ಎಳೆಯುತ್ತಿದ್ದ ಮನೆಕೆಲಸದಾಕೆಯನ್ನು ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಉಮಾ (43) ಎಂಬ ಮಹಿಳೆ, ರೂ. 67 ಲಕ್ಷ ನಗದು ಹಾಗೂ ಚಿನ್ನಾಭರಣ ಸೇರಿ ಒಟ್ಟು 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಕದಿಯುತ್ತಿದ್ದಳು.
ಚಾಮರಾಜಪೇಟೆಯ ನಿವಾಸಿಯಾಗಿರುವ ಉದ್ಯಮಿ ರಾಧಾ ಎಂಬವರು ತನ್ನ ನಿವಾಸದಲ್ಲಿ ಉಮಾಳನ್ನು ತಿಂಗಳಿಗೆ ರೂ. 23,000 ವೇತನದ ಮೇರೆಗೆ ಕೆಲಸಕ್ಕೆ ನೇಮಿಸಿದ್ದರು. ರಾಧಾ ಅವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನೆ ಕೆಲಸಕ್ಕಾಗಿ ಉಮಾಳ ಸಹಾಯ ಬೇಕಾಗಿತ್ತು.
ಆದರೆ ಜೂನ್ 4ರಂದು ಬೆಳಿಗ್ಗೆ ಉಮಾ ಕೈಯಲ್ಲಿ ಬ್ಯಾಗ್ ಹಿಡಿದು ಹೊರಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿತ್ತು. ತಕ್ಷಣ ಅನುಮಾನಗೊಂಡ ರಾಧಾ ತಮ್ಮ ಬೀರನ್ನು ಪರಿಶೀಲಿಸಿದಾಗ, ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ರಾಧಾ ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಉಮಾವನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಕಳವು ಎಸಗಿರುವುದಾಗಿ ಆರೋಪಿಯು ಸ್ವೀಕರಿಸಿದ್ದಾಳೆ.
ಈ ಹಿಂದೆ ಕೂಡ ಉಮಾ ಇನ್ನೊಂದು ಮನೆಯಲ್ಲಿಯೂ ದುಶ್ಚಟದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಂಡಿದ್ದ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈಗಾಗಲೇ ಉಮಾಳಿಂದ ಭಾಗಶಃ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಭಟ್ಕಳ: ತಾಯಿ-ತಂದೆಯ ಕಣ್ಣಿಗೆ ನಂಬಲಾಗದ ದುಃಖ ತರಿದ ಘಟನೆ ಭಟ್ಕಳದ ಆಝಾದ ನಗರದಲ್ಲಿ ನಡೆದಿದೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಎರಡು…
ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ರಸ್ತೆಯಲ್ಲಿರುವ ಬೆಸ್ಕಾಂ ಕಚೇರಿ…
ಹುಬ್ಬಳ್ಳಿ: ಪ್ರೇಮಿಸಿ ವಿವಾಹವಾದ ಯುವತಿಯನ್ನು ಆಕೆಯ ಪೋಷಕರು ಪತಿಯ ಮನೆಯಿಂದ ಬಲವಂತವಾಗಿ ಕರೆದುಕೊಂಡು ಹೋಗಿರುವ ಆತಂಕಕಾರಿ ಘಟನೆ ಹುಬ್ಬಳ್ಳಿಯಲ್ಲಿ ವರದಿಯಾಗಿದೆ.…
ಉತ್ತರಾಖಂಡದ ಕೆದಾರನಾಥ ಮಾರ್ಗದಲ್ಲಿ ಭಾನುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಯಾತ್ರಿಕರು ಮೃತಪಟ್ಟಿದ್ದಾರೆ. ಈ ದುರಂತವು…
ಉಡುಪಿಯಲ್ಲಿ ಬಿಜೆಪಿ ಯುವ ಮೋರ್ಚಾ ನಾಯಕರೊಬ್ಬರ ವಿರುದ್ಧ ಗಂಭೀರ ಆರೋಪಗಳು ಹೊರ ಬರುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋದ ಆಧಾರದ…
ಹಾಸನ: ಜಿಲ್ಲೆಯ ಮುಖ್ಯ ಆಸ್ಪತ್ರೆಯ ಆವರಣದಲ್ಲಿ ಮಾನವತೆಯ ಮೌಲ್ಯಗಳಿಗೆ ಧಕ್ಕೆ ತರುವ ಘಟನೆ ನಡೆದಿದೆ. ಮೊಬೈಲ್ ಕಳವು ಆರೋಪದ ಮೇಲೆ…