ಬೆಂಗಳೂರು: ಮಾಲೀಕನ ಮನೆಯಿಂದ ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವಿಗೆ ಎಳೆಯುತ್ತಿದ್ದ ಮನೆಕೆಲಸದಾಕೆಯನ್ನು ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಉಮಾ (43) ಎಂಬ ಮಹಿಳೆ, ರೂ. 67 ಲಕ್ಷ ನಗದು ಹಾಗೂ ಚಿನ್ನಾಭರಣ ಸೇರಿ ಒಟ್ಟು 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಕದಿಯುತ್ತಿದ್ದಳು.
ಚಾಮರಾಜಪೇಟೆಯ ನಿವಾಸಿಯಾಗಿರುವ ಉದ್ಯಮಿ ರಾಧಾ ಎಂಬವರು ತನ್ನ ನಿವಾಸದಲ್ಲಿ ಉಮಾಳನ್ನು ತಿಂಗಳಿಗೆ ರೂ. 23,000 ವೇತನದ ಮೇರೆಗೆ ಕೆಲಸಕ್ಕೆ ನೇಮಿಸಿದ್ದರು. ರಾಧಾ ಅವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನೆ ಕೆಲಸಕ್ಕಾಗಿ ಉಮಾಳ ಸಹಾಯ ಬೇಕಾಗಿತ್ತು.
ಆದರೆ ಜೂನ್ 4ರಂದು ಬೆಳಿಗ್ಗೆ ಉಮಾ ಕೈಯಲ್ಲಿ ಬ್ಯಾಗ್ ಹಿಡಿದು ಹೊರಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿತ್ತು. ತಕ್ಷಣ ಅನುಮಾನಗೊಂಡ ರಾಧಾ ತಮ್ಮ ಬೀರನ್ನು ಪರಿಶೀಲಿಸಿದಾಗ, ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ರಾಧಾ ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಉಮಾವನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಕಳವು ಎಸಗಿರುವುದಾಗಿ ಆರೋಪಿಯು ಸ್ವೀಕರಿಸಿದ್ದಾಳೆ.
ಈ ಹಿಂದೆ ಕೂಡ ಉಮಾ ಇನ್ನೊಂದು ಮನೆಯಲ್ಲಿಯೂ ದುಶ್ಚಟದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಂಡಿದ್ದ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈಗಾಗಲೇ ಉಮಾಳಿಂದ ಭಾಗಶಃ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…