ಬೆಂಗಳೂರು: ಮಾಲೀಕನ ಮನೆಯಿಂದ ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣ ಕಳವಿಗೆ ಎಳೆಯುತ್ತಿದ್ದ ಮನೆಕೆಲಸದಾಕೆಯನ್ನು ಬೆಂಗಳೂರಿನ ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಾಗಿರುವ ಉಮಾ (43) ಎಂಬ ಮಹಿಳೆ, ರೂ. 67 ಲಕ್ಷ ನಗದು ಹಾಗೂ ಚಿನ್ನಾಭರಣ ಸೇರಿ ಒಟ್ಟು 1 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಕದಿಯುತ್ತಿದ್ದಳು.
ಚಾಮರಾಜಪೇಟೆಯ ನಿವಾಸಿಯಾಗಿರುವ ಉದ್ಯಮಿ ರಾಧಾ ಎಂಬವರು ತನ್ನ ನಿವಾಸದಲ್ಲಿ ಉಮಾಳನ್ನು ತಿಂಗಳಿಗೆ ರೂ. 23,000 ವೇತನದ ಮೇರೆಗೆ ಕೆಲಸಕ್ಕೆ ನೇಮಿಸಿದ್ದರು. ರಾಧಾ ಅವರು ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಮನೆ ಕೆಲಸಕ್ಕಾಗಿ ಉಮಾಳ ಸಹಾಯ ಬೇಕಾಗಿತ್ತು.
ಆದರೆ ಜೂನ್ 4ರಂದು ಬೆಳಿಗ್ಗೆ ಉಮಾ ಕೈಯಲ್ಲಿ ಬ್ಯಾಗ್ ಹಿಡಿದು ಹೊರಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿತ್ತು. ತಕ್ಷಣ ಅನುಮಾನಗೊಂಡ ರಾಧಾ ತಮ್ಮ ಬೀರನ್ನು ಪರಿಶೀಲಿಸಿದಾಗ, ಲಕ್ಷಾಂತರ ರೂಪಾಯಿ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ರಾಧಾ ನೀಡಿದ ದೂರಿನ ಮೇರೆಗೆ ಚಾಮರಾಜಪೇಟೆ ಠಾಣೆ ಪೊಲೀಸರು ತನಿಖೆ ನಡೆಸಿ ಉಮಾವನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನೇ ಕಳವು ಎಸಗಿರುವುದಾಗಿ ಆರೋಪಿಯು ಸ್ವೀಕರಿಸಿದ್ದಾಳೆ.
ಈ ಹಿಂದೆ ಕೂಡ ಉಮಾ ಇನ್ನೊಂದು ಮನೆಯಲ್ಲಿಯೂ ದುಶ್ಚಟದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾಗೊಂಡಿದ್ದ ಮಾಹಿತಿ ಲಭ್ಯವಾಗಿದೆ. ಪೊಲೀಸರು ಈಗಾಗಲೇ ಉಮಾಳಿಂದ ಭಾಗಶಃ ನಗದು ಮತ್ತು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…