Latest

ಮದುವೆ ಭರವಸೆಯ ದ್ರೋಹ – ಪ್ರೇಮಿಯ ಮನೆ ಮುಂದೆ ಯುವತಿಯ ಧರಣಿ

ಬಳ್ಳಾರಿ: ಪ್ರೀತಿಯಲ್ಲಿ ಮೋಸಕ್ಕೊಳಗಾದ ಯುವತಿ ನ್ಯಾಯಕ್ಕಾಗಿ ಹಗಲು-ರಾತ್ರಿ ಎನ್ನದೆ ಪ್ರೇಮಿಯ ಮನೆಯ ಮುಂದೆ ಧರಣಿ ಕುಳಿತಿರುವ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.

ಮಾಹಿತಿಯಂತೆ, ಬಳ್ಳಾರಿ ತಾಲೂಕಿನ ಹೊಸ ನೆಲ್ಲುಡಿ ಗ್ರಾಮದ ನಂದೀಶ್ ಹಾಗೂ ಕೊಟ್ಟಾಲ್ ಗ್ರಾಮದ ಯುವತಿ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಯ ಭರವಸೆ ನೀಡಿದ್ದ ನಂದೀಶ್ ಇತ್ತೀಚೆಗೆ ಯುವತಿಯನ್ನು ಹಾಸನದಿಂದ ಕರೆದುಕೊಂಡು ಬಂದು, ಕಂಪ್ಲಿಯಲ್ಲಿ ಒಂದು ದಿನ ತಿರುಗಾಡಿಸಿದ್ದಾನೆ. ಆದರೆ ಮನೆಯವರಿಂದ ಫೋನ್ ಬಂದ ತಕ್ಷಣ ಅವಳನ್ನು ಬಿಟ್ಟು ಹೋಗಿದ್ದಾನೆ.

ಯುವತಿಯ ಆರೋಪ ಪ್ರಕಾರ, ನಂದೀಶ್ ಮನೆಮಂದಿ ಅವರ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಕಾರಣವಾಗಿ ಜಾತಿ ಅಡ್ಡಿಯನ್ನು ಹೇಳಿದ್ದಾರೆ. ಯುವತಿ ಭೋವಿ (ಎಸ್ಸಿ) ಸಮಾಜಕ್ಕೆ ಸೇರಿದ್ದರೆ, ನಂದೀಶ್ ಲಿಂಗಾಯತ ಜಂಗಮ ಸಮಾಜಕ್ಕೆ ಸೇರಿದವನು. ಪ್ರೀತಿ ಮಾಡುವಾಗ ಜಾತಿ ಸಮಸ್ಯೆಯಾಗಿರಲಿಲ್ಲವಾದರೂ, ಮದುವೆಯ ವಿಚಾರ ಬಂದಾಗ ವಿರೋಧ ಶುರುವಾಗಿದೆ.

ಘಟನೆಯ ನಂತರ ನಂದೀಶ್ ಕುಟುಂಬ ಮನೆಗೆ ಬೀಗ ಹಾಕಿ ಪಲಾಯನ ಮಾಡಿದೆ. “ಮದುವೆ ಮಾಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ. ನ್ಯಾಯ ಸಿಗುವವರೆಗೆ ಹಿಂಜರಿಯುವುದಿಲ್ಲ,” ಎಂದು ಯುವತಿ ಎಚ್ಚರಿಕೆ ನೀಡಿದ್ದಾರೆ. ಈ ಪ್ರತಿಭಟನೆಯ ಹಿನ್ನೆಲೆ, ಗ್ರಾಮದ ಜನರು ಮತ್ತು ಸ್ಥಳೀಯರು ಕೂಡ ಘಟನೆಗೆ ಗಮನ ಹರಿಸಿದ್ದು, ಪೊಲೀಸ್ ಇಲಾಖೆ ಪರಿಸ್ಥಿತಿ ಶಾಂತವಾಗಿಡಲು ನಿಗಾವಹಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

14 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

14 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

14 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

14 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago