ಪಾನ್ ಕಾರ್ಡ್ ಅಪ್ಡೇಟ್, ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಎಂದು ಬರುವ ಸಂದೇಶಗಳನ್ನು ಕ್ಲಿಕ್ ಮಾಡಿ ದೇಶದಲ್ಲಿ ಸಾಕಷ್ಟು ಜನರು ಮೋಸ ಹೋಗುತ್ತಿದ್ದಾರೆ.
ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಬ್ಯಾಂಕಿನವರು ತಮ್ಮ ಗ್ರಾಹಕರಿಗೆ ನಾವು ಯಾವುದೇ ರೀತಿ ಮೆಸೇಜ್ ಅಥವಾ ಕರೆಯ ಮುಖಾಂತರ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಕೇಳುವುದಿಲ್ಲ ಎಂದು ಪದೇಪದೇ ಸಂದೇಶಗಳನ್ನು ಕಳುಹಿಸಲು ಸಹ ಮುಂದಾಗಿದ್ದಾರೆ.
ಆದರೂ ಸಹ ದಿನ ದಿನಕ್ಕೂ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನದಲ್ಲಿ ಮುಂಬೈನ ಬ್ಯಾಂಕ್ ಒಂದರ ಸುಮಾರು 40 ಗ್ರಾಹಕರು ಇಂತಹ ಲಿಂಕನ್ನು ಕ್ಲಿಕ್ ಮಾಡಿ ತಮ್ಮ ಖಾತೆಯಲ್ಲಿರುವ ಹಣವನ್ನು ಕಳೆದುಕೊಂಡಿರುತ್ತಾರೆ.
ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸುವ ವಂಚಕರು ಸಂದೇಶದಲ್ಲಿರುವ ಲಿಂಕನ್ನು ಬೇರೊಂದು ವೆಬ್ಸೈಟ್ಗೆ ಕೊಂಡೊಯ್ಯುವ ರೀತಿ ಮಾಡಿಕೊಂಡಿರುತ್ತಾರೆ ಅದನ್ನು ಕ್ಲಿಕ್ಕಿಸಿದರೆ ತಮ್ಮ ವಿವರವನ್ನು ಪಡೆದು ತಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ.
ಪಾನ್ ಕಾರ್ಡ್, ಆಧಾರ್ ಕಾರ್ಡ್, ಕೆ ವೈ ಸಿ ಇನ್ನಿತರ ಅಪ್ಡೇಟ್ಗಳು ಎಂದು ಬರುವ ಸಂದೇಶಗಳನ್ನು ನಿರ್ಲಕ್ಷಿಸಿ ಹಾಗೂ ಸಂದೇಶಗಳಲ್ಲಿ ಬರುವ ಯಾವುದೇ ಲಿಂಕ್ ಅನ್ನು ತಿಳಿಯದೆ ಕ್ಲಿಕ್ ಮಾಡಬೇಡಿ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…