Latest

ಪಾನ್ ಕಾರ್ಡ್ ಅಪ್ಡೇಟ್, KYC ಎಂದು ಮೊಬೈಲ್ ಗೆ ಬರುವ ಸಂದೇಶಗಳನ್ನು ಕ್ಲಿಕ್ ಮಾಡಿದರೆ ಹಣ ಕಳೆದುಕೊಳ್ಳುತ್ತೀರಾ ಎಚ್ಚರ!!!

ಪಾನ್ ಕಾರ್ಡ್ ಅಪ್ಡೇಟ್, ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಎಂದು ಬರುವ ಸಂದೇಶಗಳನ್ನು ಕ್ಲಿಕ್ ಮಾಡಿ ದೇಶದಲ್ಲಿ ಸಾಕಷ್ಟು ಜನರು ಮೋಸ ಹೋಗುತ್ತಿದ್ದಾರೆ.
ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಬ್ಯಾಂಕಿನವರು ತಮ್ಮ ಗ್ರಾಹಕರಿಗೆ ನಾವು ಯಾವುದೇ ರೀತಿ ಮೆಸೇಜ್ ಅಥವಾ ಕರೆಯ ಮುಖಾಂತರ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಕೇಳುವುದಿಲ್ಲ ಎಂದು ಪದೇಪದೇ ಸಂದೇಶಗಳನ್ನು ಕಳುಹಿಸಲು ಸಹ ಮುಂದಾಗಿದ್ದಾರೆ.
ಆದರೂ ಸಹ ದಿನ ದಿನಕ್ಕೂ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನದಲ್ಲಿ ಮುಂಬೈನ ಬ್ಯಾಂಕ್ ಒಂದರ ಸುಮಾರು 40 ಗ್ರಾಹಕರು ಇಂತಹ ಲಿಂಕನ್ನು ಕ್ಲಿಕ್ ಮಾಡಿ ತಮ್ಮ ಖಾತೆಯಲ್ಲಿರುವ ಹಣವನ್ನು ಕಳೆದುಕೊಂಡಿರುತ್ತಾರೆ.
ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸುವ ವಂಚಕರು ಸಂದೇಶದಲ್ಲಿರುವ ಲಿಂಕನ್ನು ಬೇರೊಂದು ವೆಬ್ಸೈಟ್ಗೆ ಕೊಂಡೊಯ್ಯುವ ರೀತಿ ಮಾಡಿಕೊಂಡಿರುತ್ತಾರೆ ಅದನ್ನು ಕ್ಲಿಕ್ಕಿಸಿದರೆ ತಮ್ಮ ವಿವರವನ್ನು ಪಡೆದು ತಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ.
ಪಾನ್ ಕಾರ್ಡ್, ಆಧಾರ್ ಕಾರ್ಡ್, ಕೆ ವೈ ಸಿ ಇನ್ನಿತರ ಅಪ್ಡೇಟ್ಗಳು ಎಂದು ಬರುವ ಸಂದೇಶಗಳನ್ನು ನಿರ್ಲಕ್ಷಿಸಿ ಹಾಗೂ ಸಂದೇಶಗಳಲ್ಲಿ ಬರುವ ಯಾವುದೇ ಲಿಂಕ್ ಅನ್ನು ತಿಳಿಯದೆ ಕ್ಲಿಕ್ ಮಾಡಬೇಡಿ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago