Latest

ಪಾನ್ ಕಾರ್ಡ್ ಅಪ್ಡೇಟ್, KYC ಎಂದು ಮೊಬೈಲ್ ಗೆ ಬರುವ ಸಂದೇಶಗಳನ್ನು ಕ್ಲಿಕ್ ಮಾಡಿದರೆ ಹಣ ಕಳೆದುಕೊಳ್ಳುತ್ತೀರಾ ಎಚ್ಚರ!!!

ಪಾನ್ ಕಾರ್ಡ್ ಅಪ್ಡೇಟ್, ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಎಂದು ಬರುವ ಸಂದೇಶಗಳನ್ನು ಕ್ಲಿಕ್ ಮಾಡಿ ದೇಶದಲ್ಲಿ ಸಾಕಷ್ಟು ಜನರು ಮೋಸ ಹೋಗುತ್ತಿದ್ದಾರೆ.
ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಬ್ಯಾಂಕಿನವರು ತಮ್ಮ ಗ್ರಾಹಕರಿಗೆ ನಾವು ಯಾವುದೇ ರೀತಿ ಮೆಸೇಜ್ ಅಥವಾ ಕರೆಯ ಮುಖಾಂತರ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಕೇಳುವುದಿಲ್ಲ ಎಂದು ಪದೇಪದೇ ಸಂದೇಶಗಳನ್ನು ಕಳುಹಿಸಲು ಸಹ ಮುಂದಾಗಿದ್ದಾರೆ.
ಆದರೂ ಸಹ ದಿನ ದಿನಕ್ಕೂ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನದಲ್ಲಿ ಮುಂಬೈನ ಬ್ಯಾಂಕ್ ಒಂದರ ಸುಮಾರು 40 ಗ್ರಾಹಕರು ಇಂತಹ ಲಿಂಕನ್ನು ಕ್ಲಿಕ್ ಮಾಡಿ ತಮ್ಮ ಖಾತೆಯಲ್ಲಿರುವ ಹಣವನ್ನು ಕಳೆದುಕೊಂಡಿರುತ್ತಾರೆ.
ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸುವ ವಂಚಕರು ಸಂದೇಶದಲ್ಲಿರುವ ಲಿಂಕನ್ನು ಬೇರೊಂದು ವೆಬ್ಸೈಟ್ಗೆ ಕೊಂಡೊಯ್ಯುವ ರೀತಿ ಮಾಡಿಕೊಂಡಿರುತ್ತಾರೆ ಅದನ್ನು ಕ್ಲಿಕ್ಕಿಸಿದರೆ ತಮ್ಮ ವಿವರವನ್ನು ಪಡೆದು ತಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ.
ಪಾನ್ ಕಾರ್ಡ್, ಆಧಾರ್ ಕಾರ್ಡ್, ಕೆ ವೈ ಸಿ ಇನ್ನಿತರ ಅಪ್ಡೇಟ್ಗಳು ಎಂದು ಬರುವ ಸಂದೇಶಗಳನ್ನು ನಿರ್ಲಕ್ಷಿಸಿ ಹಾಗೂ ಸಂದೇಶಗಳಲ್ಲಿ ಬರುವ ಯಾವುದೇ ಲಿಂಕ್ ಅನ್ನು ತಿಳಿಯದೆ ಕ್ಲಿಕ್ ಮಾಡಬೇಡಿ.

ಭ್ರಷ್ಟರ ಬೇಟೆ

Recent Posts

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

2 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

2 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

2 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

2 hours ago

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

11 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

11 hours ago