Latest

ಪಾನ್ ಕಾರ್ಡ್ ಅಪ್ಡೇಟ್, KYC ಎಂದು ಮೊಬೈಲ್ ಗೆ ಬರುವ ಸಂದೇಶಗಳನ್ನು ಕ್ಲಿಕ್ ಮಾಡಿದರೆ ಹಣ ಕಳೆದುಕೊಳ್ಳುತ್ತೀರಾ ಎಚ್ಚರ!!!

ಪಾನ್ ಕಾರ್ಡ್ ಅಪ್ಡೇಟ್, ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಎಂದು ಬರುವ ಸಂದೇಶಗಳನ್ನು ಕ್ಲಿಕ್ ಮಾಡಿ ದೇಶದಲ್ಲಿ ಸಾಕಷ್ಟು ಜನರು ಮೋಸ ಹೋಗುತ್ತಿದ್ದಾರೆ.
ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಬ್ಯಾಂಕಿನವರು ತಮ್ಮ ಗ್ರಾಹಕರಿಗೆ ನಾವು ಯಾವುದೇ ರೀತಿ ಮೆಸೇಜ್ ಅಥವಾ ಕರೆಯ ಮುಖಾಂತರ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಕೇಳುವುದಿಲ್ಲ ಎಂದು ಪದೇಪದೇ ಸಂದೇಶಗಳನ್ನು ಕಳುಹಿಸಲು ಸಹ ಮುಂದಾಗಿದ್ದಾರೆ.
ಆದರೂ ಸಹ ದಿನ ದಿನಕ್ಕೂ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನದಲ್ಲಿ ಮುಂಬೈನ ಬ್ಯಾಂಕ್ ಒಂದರ ಸುಮಾರು 40 ಗ್ರಾಹಕರು ಇಂತಹ ಲಿಂಕನ್ನು ಕ್ಲಿಕ್ ಮಾಡಿ ತಮ್ಮ ಖಾತೆಯಲ್ಲಿರುವ ಹಣವನ್ನು ಕಳೆದುಕೊಂಡಿರುತ್ತಾರೆ.
ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸುವ ವಂಚಕರು ಸಂದೇಶದಲ್ಲಿರುವ ಲಿಂಕನ್ನು ಬೇರೊಂದು ವೆಬ್ಸೈಟ್ಗೆ ಕೊಂಡೊಯ್ಯುವ ರೀತಿ ಮಾಡಿಕೊಂಡಿರುತ್ತಾರೆ ಅದನ್ನು ಕ್ಲಿಕ್ಕಿಸಿದರೆ ತಮ್ಮ ವಿವರವನ್ನು ಪಡೆದು ತಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ.
ಪಾನ್ ಕಾರ್ಡ್, ಆಧಾರ್ ಕಾರ್ಡ್, ಕೆ ವೈ ಸಿ ಇನ್ನಿತರ ಅಪ್ಡೇಟ್ಗಳು ಎಂದು ಬರುವ ಸಂದೇಶಗಳನ್ನು ನಿರ್ಲಕ್ಷಿಸಿ ಹಾಗೂ ಸಂದೇಶಗಳಲ್ಲಿ ಬರುವ ಯಾವುದೇ ಲಿಂಕ್ ಅನ್ನು ತಿಳಿಯದೆ ಕ್ಲಿಕ್ ಮಾಡಬೇಡಿ.

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

19 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

19 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

20 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

20 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago