ಪಾನ್ ಕಾರ್ಡ್ ಅಪ್ಡೇಟ್, ಕೆ ವೈ ಸಿ ಹಾಗೂ ಆಧಾರ್ ಲಿಂಕ್ ಮಾಡಿಸಿಕೊಳ್ಳಿ ಎಂದು ಬರುವ ಸಂದೇಶಗಳನ್ನು ಕ್ಲಿಕ್ ಮಾಡಿ ದೇಶದಲ್ಲಿ ಸಾಕಷ್ಟು ಜನರು ಮೋಸ ಹೋಗುತ್ತಿದ್ದಾರೆ.
ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಬ್ಯಾಂಕಿನವರು ತಮ್ಮ ಗ್ರಾಹಕರಿಗೆ ನಾವು ಯಾವುದೇ ರೀತಿ ಮೆಸೇಜ್ ಅಥವಾ ಕರೆಯ ಮುಖಾಂತರ ಸಂಪರ್ಕಿಸಿ ತಮ್ಮ ಮಾಹಿತಿಯನ್ನು ಕೇಳುವುದಿಲ್ಲ ಎಂದು ಪದೇಪದೇ ಸಂದೇಶಗಳನ್ನು ಕಳುಹಿಸಲು ಸಹ ಮುಂದಾಗಿದ್ದಾರೆ.
ಆದರೂ ಸಹ ದಿನ ದಿನಕ್ಕೂ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.
ಇತ್ತೀಚಿನ ದಿನದಲ್ಲಿ ಮುಂಬೈನ ಬ್ಯಾಂಕ್ ಒಂದರ ಸುಮಾರು 40 ಗ್ರಾಹಕರು ಇಂತಹ ಲಿಂಕನ್ನು ಕ್ಲಿಕ್ ಮಾಡಿ ತಮ್ಮ ಖಾತೆಯಲ್ಲಿರುವ ಹಣವನ್ನು ಕಳೆದುಕೊಂಡಿರುತ್ತಾರೆ.
ಎಸ್ಎಂಎಸ್ ಮೂಲಕ ಸಂದೇಶ ಕಳುಹಿಸುವ ವಂಚಕರು ಸಂದೇಶದಲ್ಲಿರುವ ಲಿಂಕನ್ನು ಬೇರೊಂದು ವೆಬ್ಸೈಟ್ಗೆ ಕೊಂಡೊಯ್ಯುವ ರೀತಿ ಮಾಡಿಕೊಂಡಿರುತ್ತಾರೆ ಅದನ್ನು ಕ್ಲಿಕ್ಕಿಸಿದರೆ ತಮ್ಮ ವಿವರವನ್ನು ಪಡೆದು ತಮ್ಮ ಖಾತೆಯಲ್ಲಿರುವ ಹಣವನ್ನು ದೋಚುತ್ತಾರೆ.
ಪಾನ್ ಕಾರ್ಡ್, ಆಧಾರ್ ಕಾರ್ಡ್, ಕೆ ವೈ ಸಿ ಇನ್ನಿತರ ಅಪ್ಡೇಟ್ಗಳು ಎಂದು ಬರುವ ಸಂದೇಶಗಳನ್ನು ನಿರ್ಲಕ್ಷಿಸಿ ಹಾಗೂ ಸಂದೇಶಗಳಲ್ಲಿ ಬರುವ ಯಾವುದೇ ಲಿಂಕ್ ಅನ್ನು ತಿಳಿಯದೆ ಕ್ಲಿಕ್ ಮಾಡಬೇಡಿ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…