Latest

ಮನೆಕಳವು ಪ್ರಕರಣ: ಆರೋಪಿಯ ಬಂಧನ, ₹1.12 ಲಕ್ಷ ಮೌಲ್ಯದ ವಸ್ತುಗಳು ವಶ

ಭದ್ರಾವತಿ: ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ವ್ಯಕ್ತಿಯನ್ನು ಭದ್ರಾವತಿಯ ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. (21) ಎಂದು ಗುರುತಿಸಲಾಗಿದೆ.

ಮೇ 2ರ ರಾತ್ರಿ, ಬಿ.ಎಚ್. ರಸ್ತೆ ಬಳಿ ಇರುವ ಮೀನುಗಾರರ ಬೀದಿಯ ಮನೆಯಲ್ಲಿ ಸಿಮೆಂಟ್ ಶೀಟ್ ಒಡೆದು ಒಳ ಪ್ರವೇಶಿಸಿದ ಕಳ್ಳರು, ಸುಮಾರು ₹1.12 ಲಕ್ಷ ಮೌಲ್ಯದ ಬಂಗಾರದ ಆಭರಣಗಳು, ನಗದು ಹಾಗೂ ಗಡಿಯಾರವನ್ನು ಕಳವು ಮಾಡಿದ್ದರು. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪತ್ತೆಗೆ ಜಿಲ್ಲಾ ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಎಸ್‌ಪಿಗಳು ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ. ಕಾರಿಯಪ್ಪ ಅವರು ಮಾರ್ಗದರ್ಶನ ನೀಡಿದರು. ನಗರ ಉಪ ವಿಭಾಗದ ಡಿವೈಎಸ್‌ಪಿ ಕೆ.ಆರ್. ನಾಗರಾಜ್ ಹಾಗೂ ಸಿಪಿಐ ಶ್ರೀಶೈಲ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಠಾಣೆಯ ಪಿಎಸ್‌ಐ ಟಿ. ರಮೇಶ್ ನೇತೃತ್ವದಲ್ಲಿ ಎಎಸ್‌ಐ ಟಿ.ಪಿ. ಮಂಜಪ್ಪ, ಸಿ.ಎಚ್.ಸಿ. ನವೀನ್ ಮತ್ತು ಸಿಪಿಸಿ ನಾಗರಾಜ್ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ತಪಾಸಣೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಅವನಿಂದ ಕಳವಾದ ಆಭರಣಗಳು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸಲು ತನಿಖೆ ಮುಂದುವರೆಸಿದ್ದಾರೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

4 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

4 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

4 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

4 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

4 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

4 hours ago