ಭದ್ರಾವತಿ: ನ್ಯೂಟೌನ್ ಪೊಲೀಸರು ಇತ್ತೀಚೆಗೆ ನಡೆದ ಮನೆ ಕಳ್ಳತನ ಪ್ರಕರಣವೊಂದನ್ನು ಭೇದಿಸಿ, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಾವತಿಯ ಮೀನುಗಾರರ ಬೀದಿಯ ನಿವಾಸಿ ಜೈಕಾಂತ್ ಪಿ. (21) ಎಂದು ಗುರುತಿಸಲಾಗಿದೆ.
ಮೇ 2ರ ರಾತ್ರಿ, ಬಿ.ಎಚ್. ರಸ್ತೆ ಬಳಿ ಇರುವ ಮೀನುಗಾರರ ಬೀದಿಯ ಮನೆಯಲ್ಲಿ ಸಿಮೆಂಟ್ ಶೀಟ್ ಒಡೆದು ಒಳ ಪ್ರವೇಶಿಸಿದ ಕಳ್ಳರು, ಸುಮಾರು ₹1.12 ಲಕ್ಷ ಮೌಲ್ಯದ ಬಂಗಾರದ ಆಭರಣಗಳು, ನಗದು ಹಾಗೂ ಗಡಿಯಾರವನ್ನು ಕಳವು ಮಾಡಿದ್ದರು. ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಪತ್ತೆಗೆ ಜಿಲ್ಲಾ ಎಸ್ಪಿ ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಎಸ್ಪಿಗಳು ಅನಿಲ್ ಕುಮಾರ್ ಭೂಮರೆಡ್ಡಿ ಮತ್ತು ಎ.ಜಿ. ಕಾರಿಯಪ್ಪ ಅವರು ಮಾರ್ಗದರ್ಶನ ನೀಡಿದರು. ನಗರ ಉಪ ವಿಭಾಗದ ಡಿವೈಎಸ್ಪಿ ಕೆ.ಆರ್. ನಾಗರಾಜ್ ಹಾಗೂ ಸಿಪಿಐ ಶ್ರೀಶೈಲ ಕುಮಾರ್ ಅವರ ಮೇಲ್ವಿಚಾರಣೆಯಲ್ಲಿ ನ್ಯೂಟೌನ್ ಠಾಣೆಯ ಪಿಎಸ್ಐ ಟಿ. ರಮೇಶ್ ನೇತೃತ್ವದಲ್ಲಿ ಎಎಸ್ಐ ಟಿ.ಪಿ. ಮಂಜಪ್ಪ, ಸಿ.ಎಚ್.ಸಿ. ನವೀನ್ ಮತ್ತು ಸಿಪಿಸಿ ನಾಗರಾಜ್ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.
ತಪಾಸಣೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಅವನಿಂದ ಕಳವಾದ ಆಭರಣಗಳು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಇನ್ನಷ್ಟು ಮಾಹಿತಿ ಸಂಗ್ರಹಿಸಲು ತನಿಖೆ ಮುಂದುವರೆಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…