Latest

ಭಾರತಿ ಶೆಟ್ಟಿಯ ಧ್ವನಿ ವಿವಾದಕ್ಕೆ ಕಾರಣ: ವ್ಯವಹಾರದಲ್ಲಿ ಧರ್ಮ ಆಧಾರಿತ ಕರೆ!”

ಬೆಳ್ತಂಗಡಿ, ಮೇ 13 – ಬೆಳ್ತಂಗಡಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಭಾಷಣದಿಂದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಗುರುವಾಯನಕೆರೆಯಲ್ಲಿ ನಡೆದ ಈ ಕಾರ್ಯಕ್ರಮದ ವೇಳೆ ಅವರು ಮಾಡಿದ ಮತಭೇದ ಉಣಡುವ ಹೇಳಿಕೆಯ ವಿಡಿಯೋ ಇದೀಗ ಹರಿದಾಡುತ್ತಿದೆ.

‘ಸಾಯಿರಾಮ್ ಫ್ರೆಂಡ್ಸ್ ಗುರುವಾಯನಕೆರೆ’ ಎಂಬ ಸಂಘಟನೆ ಆಯೋಜಿಸಿದ್ದ “ಸುಹಾಸ್ ಶೆಟ್ಟಿ ನುಡಿನಮನ” ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾರತಿ ಶೆಟ್ಟಿ ಮಾತನಾಡುತ್ತಾ, “ಸರಕಸರಿಗೆ ದರ ಜಾಸ್ತಿಯಾದರೂ ನಾವು ನಮ್ಮವರ ಅಂಗಡಿಗಳಿಂದಲೇ ಖರೀದಿ ಮಾಡಬೇಕು. ಅದು ನಮ್ಮ ಸಮುದಾಯದ ಶಕ್ತಿ ವೃದ್ಧಿಗೆ ಕಾರಣವಾಗುತ್ತದೆ. ದರ ಕಡಿಮೆಯೋ ಅಥವಾ ಮಾತು ಸಿಹಿಯೋ ಎಂಬ ಕಾರಣಕ್ಕೆ ಇತರ ಸಮುದಾಯದ ಅಂಗಡಿಗಳ ಕಡೆ ಹೋಗಬಾರದು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅದಕ್ಕೂ ಮೀರಿದ ಹೇಳಿಕೆಯೊಂದರಲ್ಲಿ ಅವರು, “ಗುರುವಾಯನಕೆರೆ ಪೇಟೆಯಲ್ಲಿ ಮುಸ್ಲಿಂ ರಿಕ್ಷಾ ಚಾಲಕರ ಪ್ರಮಾಣ ಹೆಚ್ಚಾಗಿದೆ. ಬೆಳಿಗ್ಗೆ ಆಗುವ ವೇಳೆಗೆ ಹಿಂದೂ ಚಾಲಕರು ಕಾಣೆಯೇ ಆಗುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ ನಮ್ಮವರು ಹೆಚ್ಚು ಸಕ್ರಿಯರಾಗಬೇಕಾಗಿದೆ” ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಮತ್ತು ವಿಶ್ವ ಹಿಂದೂ ಪರಿಷತ್ತಿನ ಮುಖಂಡ ನವೀನ್ ನೆರಿಯಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಭಾರತಿ ಶೆಟ್ಟಿಯ ಈ ಹೇಳಿಕೆ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಸಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ಏನೆಂದು ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನಿರೀಕ್ಷಿಸಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago