Crime

ಭಟ್ಕಳ ಪೊಲೀಸರಿಂದ ಬೃಹತ್ ಪ್ರಮಾಣದ ಗಾಂಜಾ ವಶ..!

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ನಗರ ಠಾಣೆ ಪೊಲೀಸರು ಭರ್ಜರಿ ಗಾಂಜಾ ಭೇಟೆ ನಡೆಸಿದ್ದು 4,50,000 ಮೊತ್ತದ ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ (10/11/2024) ಸಂಜೆ 5.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ತೆಂಗಿನಗುಡಿ ಕ್ರಾಸ್ ಬಳಿ ಹುಂಡೈ ಕಂಪನಿಯ ಬಿಳಿ ಬಣ್ಣದ ಎಸೆಂಟ್ ಕಾರಿನಲ್ಲಿ 9 ಕೆ.ಜಿ. 170 ಗ್ರಾಂ ತೂಕದ ನಿಷೇಧಿತ ಗಾಂಜಾ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಭಟ್ಕಳ ನಗರ ಪೊಲೀಸರು ಕಾರು, ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
ವಶ ಪಡಿಸಿಕೊಂಡ 9 ಕೆ.ಜಿ. 170 ಗ್ರಾಂ ಗಾಂಜಾ ಬೆಲೆ 4,50,000 ರೂಪಾಯಿ ಮತ್ತು ವಶ ಪಡಿಸಿಕೊಂಡ ಕಾರಿನ ಬೆಲೆ 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಯ್ಯದ್ ಅಕ್ರಂ (24), ಅಬ್ದುಲ್ ರೆಹಮಾನ್ (27), ಅಜರುದ್ದೀನ್ (41) ಇವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ಜೊತಗಿದ್ದ ಖಾಸಿಂ ಎನ್ನುವಾತ ತಪ್ಪಿಸಿಕೊಂಡಿದ್ದು, ಈತನನ್ನು ವಶಕ್ಕೆ ಪಡೆಯಲು ಪೊಲೀಸರು ಬಲೆ ಬೀಸಿದ್ದಾರೆ.
ಭಟ್ಕಳ ಪೊಲೀಸರ ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ ಅವರು ಶ್ಲಾಘಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವರದಿ: ಮಂಜುನಾಥ್ ಎಫ್ ಎಚ್
ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

4 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago