ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ನಗರ ಠಾಣೆ ಪೊಲೀಸರು ಭರ್ಜರಿ ಗಾಂಜಾ ಭೇಟೆ ನಡೆಸಿದ್ದು 4,50,000 ಮೊತ್ತದ ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ (10/11/2024) ಸಂಜೆ 5.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ತೆಂಗಿನಗುಡಿ ಕ್ರಾಸ್ ಬಳಿ ಹುಂಡೈ ಕಂಪನಿಯ ಬಿಳಿ ಬಣ್ಣದ ಎಸೆಂಟ್ ಕಾರಿನಲ್ಲಿ 9 ಕೆ.ಜಿ. 170 ಗ್ರಾಂ ತೂಕದ ನಿಷೇಧಿತ ಗಾಂಜಾ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಭಟ್ಕಳ ನಗರ ಪೊಲೀಸರು ಕಾರು, ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
ವಶ ಪಡಿಸಿಕೊಂಡ 9 ಕೆ.ಜಿ. 170 ಗ್ರಾಂ ಗಾಂಜಾ ಬೆಲೆ 4,50,000 ರೂಪಾಯಿ ಮತ್ತು ವಶ ಪಡಿಸಿಕೊಂಡ ಕಾರಿನ ಬೆಲೆ 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಯ್ಯದ್ ಅಕ್ರಂ (24), ಅಬ್ದುಲ್ ರೆಹಮಾನ್ (27), ಅಜರುದ್ದೀನ್ (41) ಇವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ಜೊತಗಿದ್ದ ಖಾಸಿಂ ಎನ್ನುವಾತ ತಪ್ಪಿಸಿಕೊಂಡಿದ್ದು, ಈತನನ್ನು ವಶಕ್ಕೆ ಪಡೆಯಲು ಪೊಲೀಸರು ಬಲೆ ಬೀಸಿದ್ದಾರೆ.
ಭಟ್ಕಳ ಪೊಲೀಸರ ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ ಅವರು ಶ್ಲಾಘಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್ ಎಫ್ ಎಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…