ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ನಗರ ಠಾಣೆ ಪೊಲೀಸರು ಭರ್ಜರಿ ಗಾಂಜಾ ಭೇಟೆ ನಡೆಸಿದ್ದು 4,50,000 ಮೊತ್ತದ ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ (10/11/2024) ಸಂಜೆ 5.30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ ತೆಂಗಿನಗುಡಿ ಕ್ರಾಸ್ ಬಳಿ ಹುಂಡೈ ಕಂಪನಿಯ ಬಿಳಿ ಬಣ್ಣದ ಎಸೆಂಟ್ ಕಾರಿನಲ್ಲಿ 9 ಕೆ.ಜಿ. 170 ಗ್ರಾಂ ತೂಕದ ನಿಷೇಧಿತ ಗಾಂಜಾ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಭಟ್ಕಳ ನಗರ ಪೊಲೀಸರು ಕಾರು, ಗಾಂಜಾ ಸಹಿತ ಮೂವರನ್ನು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಿದ್ದಾರೆ.
ವಶ ಪಡಿಸಿಕೊಂಡ 9 ಕೆ.ಜಿ. 170 ಗ್ರಾಂ ಗಾಂಜಾ ಬೆಲೆ 4,50,000 ರೂಪಾಯಿ ಮತ್ತು ವಶ ಪಡಿಸಿಕೊಂಡ ಕಾರಿನ ಬೆಲೆ 6 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಸಯ್ಯದ್ ಅಕ್ರಂ (24), ಅಬ್ದುಲ್ ರೆಹಮಾನ್ (27), ಅಜರುದ್ದೀನ್ (41) ಇವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ಜೊತಗಿದ್ದ ಖಾಸಿಂ ಎನ್ನುವಾತ ತಪ್ಪಿಸಿಕೊಂಡಿದ್ದು, ಈತನನ್ನು ವಶಕ್ಕೆ ಪಡೆಯಲು ಪೊಲೀಸರು ಬಲೆ ಬೀಸಿದ್ದಾರೆ.
ಭಟ್ಕಳ ಪೊಲೀಸರ ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ ಅವರು ಶ್ಲಾಘಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ: ಮಂಜುನಾಥ್ ಎಫ್ ಎಚ್
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…