Latest

ಭುವನೇಶ್ವರ: ಪುರಿಯಲ್ಲಿ ಕ್ರೂರ ದಾಳಿ, 15 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮೂವರು ಯುವಕರು

ಭುವನೇಶ್ವರ, ಜುಲೈ 19: ಒಡಿಶಾದ ಪುರಿ ಜಿಲ್ಲೆಯ ಬಾಲಂಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಭಯಾನಕ ಘಟನೆ ನಡೆಯಿದ್ದು, ಅಲ್ಪಸಂಖ್ಯಾತ ಸಮುದಾಯದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಯುವಕರ ಗುಂಪು ದಾಳಿ ನಡೆಸಿದ್ದು, ಆಕೆಗೆ ಬೆಂಕಿ ಹಚ್ಚಿದ ಘೋರ ಪ್ರಕರಣ ಬೆಳಕಿಗೆ ಬಂದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಬಾಲಕಿಯನ್ನು ಭುವನೇಶ್ವರದ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಾಲಕಿ ಶನಿವಾರ ಬೆಳಗ್ಗೆ ತನ್ನ ಸ್ನೇಹಿತೆಯ ಮನೆಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಮೂವರು ಯುವಕರು ಆಕೆಯ ಬಾಯಿಗೆ ಕರ್ಚೀಪ್ ಬಿಗಿದು ಅಪಹರಿಸಿದ್ದಾರೆ. ಬಳಿಕ ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದು, ಸೀಮೆಎಣ್ಣೆ ಅಥವಾ ಅದಕ್ಕೆ ಸಮಾನ ದ್ರಾವಣದೊಂದಿಗೆ ಬೆಂಕಿ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಆಕೆ ಜೀವ ಉಳಿಸಲು ಪಲಾಯನ ಮಾಡಿದ್ದು, ಸಮೀಪದ ಹಳ್ಳಿಗೆ ಓಡಿ ಹೋಗಿ ಸಹಾಯಕ್ಕಾಗಿ ಕೂಗಿದ್ದಾರೆ.

ಸ್ಥಳೀಯ ನಿವಾಸಿ ದುಃಖಿಶ್ಯಾಮ್ ಸೇನಾಪತಿ ಬಾಲಕಿಯ ಕೂಗಾಟ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಿ ಆಕೆಯನ್ನು ರಕ್ಷಿಸಿದ್ದಾರೆ. ಆತನ ಮನೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಿದ್ದು, ಹೊಸ ಬಟ್ಟೆಗಳನ್ನು ಒದಗಿಸಿದ್ದಾರೆ.

ಮೂವರು ಯುವಕರು ಬಾಲಕಿಯನ್ನು ಬಲವಂತವಾಗಿ ಕರೆದೊಯ್ದು ಬೆಂಕಿ ಹಚ್ಚಿರುವುದಾಗಿ ಆಕೆ ತಿಳಿಸಿದ್ದಾಳೆ” ಎಂದು ವಿವರಿಸಿದರು.

ಪೊಲೀಸ್ ಇಲಾಖೆಯು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಆರಂಭಿಸಿದ್ದು, ಪುರಿ ಜಿಲ್ಲೆಯ ಹಂಗಾಮಿ ಎಸ್‌ಪಿ ಹಾಗೂ ಡಿಐಜಿ ಪಿನಾಕ್ ಮಿಶ್ರಾ ನೇತೃತ್ವದ ವಿಶೇಷ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಘಟನೆ ನಡೆದ ಸ್ಥಳದಲ್ಲಿ ಎರಡು ಬಾಟಲ್‌ಗಳು ಪತ್ತೆಯಾಗಿದ್ದು, ಅವುಗಳಲ್ಲಿ ಸೀಮೆಎಣ್ಣೆಯ ಸುಳಿವು ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪೂರ್ವನಿಯೋಜಿತ ಕ್ರೂರ ಕೃತ್ಯ ಎನ್ನುವ ಶಂಕೆಯೂ ವ್ಯಕ್ತವಾಗಿದೆ.

ಘಟನೆಯು ರಾಜ್ಯಾದ್ಯಂತ ತೀವ್ರ ಆಕ್ರೋಶ ಹುಟ್ಟುಹಾಕಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಕೂಗು ಎದ್ದಿದೆ.

nazeer ahamad

Recent Posts

ಮೊರಾರ್ಜಿ ವಸತಿ ಶಾಲೆಯ ಬಾಲಕಿ ಗರ್ಭಿಣಿ! ವರ್ಷಪೂರ್ತಿ ಅತ್ಯಾಚಾರ: ಕಾಮುಕನ ವಿರುದ್ಧ ಪೋಕ್ಸೋ ಕೇಸ್

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…

1 hour ago

ಮನೆ ಮಾಲೀಕರಿಗೇ ಶಾಕ್ ಕೊಟ್ಟ ಬಾಡಿಗೆದಾರರು! ಮನೆ ಖಾಲಿ ಇದ್ದ ವೇಳೆ 45 ಗ್ರಾಂ ಚಿನ್ನ ದೋಚಿದ ದಂಪತಿ ಅರೆಸ್ಟ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…

1 hour ago

ಅಸ್ಸಾಂಗೆ ಮಾಹಿತಿ ನೀಡದೆ ತೆರಳಿದ ಪ್ರಕರಣ: ಹುಳಿಯಾರು ಠಾಣೆಯ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…

11 hours ago

ರಾಜಾಜಿನಗರದಲ್ಲಿ ಭೀಕರ ಅವಘಡ: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರದ ಕೊಂಬೆ, ಸವಾರ ಕೋಮಾದಲ್ಲಿ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…

12 hours ago

ವೈರಲ್ ವಿಡಿಯೋ ಕುರಿತು ಸ್ಪಷ್ಟನೆ: ಮಗುವಿಗೆ ಹೊಡೆದ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಅಲ್ಲ, ಮಗುವಿನ ತಾಯಿಯೇ ಎಂಬ ಮಾಹಿತಿ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…

12 hours ago

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…

12 hours ago