Latest

ಬಾರಿ ಅಪಘಾತ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು !!

ಯಲ್ಲಾಪುರದಲ್ಲಿ ಭೀಕರ ಅನಾಹುತ ದೀ 27 ರಂದು ಮದ್ಯಾಹ್ನ 3 ರ ಸುಮಾರಿಗೆ ಯಲ್ಲಾಪುರದ ನಾಯ್ಕನಕೆರೆ ಹತ್ತಿರ ಸಿದ್ಧಿ ವಿನಾಯಕ ಟ್ರೇಡರ್ಸ್ ಎದುರಿಗೆ N H 63 ರಸ್ತೆಯ ಮೇಲೆ ಬುಲೆರೋ ಪಿಕ್ ಅಪ್ ವಾಹನ ಗಾಡಿ ನಂಬರ್ KA 25 AB 8002 ವಾಹನ ಚಾಲಕ ದಿನೇಶ ತಂದೆ ಚದರಸಿಂಗ ಈತನು ತನ್ನ ವಾಹನವನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತಿವೇಗ ಹಾಗೂ ಚಾಲನೆ ಮಾಡಿಕೊಂಡು ನಿಷ್ಕಾಳಜಿಯಿಂದ ಬಂದವನು ತನ್ನ ಮುಂದೆ ಹೋಗುತ್ತಿದ್ದ ಟ್ರಕ್ ನ್ನು ಓವರ್ ಟೇಕ್ ಮಾಡಿದ್ದು ಅಲ್ಲದೆ ತನ್ನ ರಸ್ತೆಯ ಬಲಬದಿಗೆ ಹೋಗಿದ್ದು ತನ್ನ ವೇಗವನ್ನು ನಿಯಂತ್ರಿಸಲಾಗದೆ ಯಲ್ಲಾಪುರ ಟೌನ್ ಕಡೆಯಿಂದ ನಾಯ್ಕನಕೆರೆ ಕಡೆಗೆ ಸಚಿನ್ ಇವರು ತನ್ನ ವಾಹನವನ್ನು ಬಲಭಾಗದಿಂದ ತನ್ನ ಬದಿಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಮೋಟಾರ್ ಸೈಕಲ್ ಗಾಡಿ ನಂ KA 31 R 5917 ದ್ವಿಚಕ್ರ ವಾಹನ ಅಪಘಾತ ಪಡಿಸಿದ್ದರಿಂದಲೇ ಈ ಅಪಘಾತವಾಗಿ , ಮೋಟಾರ್ ಸೈಕಲ್ ಸವಾರನದ ಸಚಿನ ಈತನ ತಲೆ ಒಡೆದು , ಮೆದುಳು ಮಾಂಸ ಹೊರಬಂದಿದ್ದು ಬಲ ಕಾಲು ಮುರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ, ಮೋಟಾರ್ ಹಿಂಬದಿ ಸವಾರ ದೀಪಕ ಈತನ ಕಾಲಿಗೆ , ಕೈ ಗೆ ಮತ್ತು ತಲೆಗೆ ಗಂಭೀರ ಸ್ವರೂಪದ ಗಾಯಪೆಟ್ಟು ಪಡಿಸಿ , ಎರಡೂ ವಾಹನಗಳನ್ನು ಜಖಂಗೊಳಿಸಿದ್ದಾನೆ . ಸದರಿ ಬುಲೆರೋ ಪಿಕ್ ಅಪ್ ವಾಹನದ ಚಾಲಕನ ಮೇಲೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

13 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

13 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

13 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

13 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago