Latest

ಮದುವೆಯ ಘೋಷಣೆಯ ನಂತರವೇ ಬಿಗ್ ರಿವೀಲ್: 6 ತಿಂಗಳ ಗರ್ಭಿಣಿ ಎಂಬ ಘೋಷಣೆ ಕೊಟ್ಟ ನಟ ರಂಗರಾಜ್ ಪತ್ನಿ!

ಮಾಧಂಪಟ್ಟಿ ರಂಗರಾಜ್ ಅವರ ಹೊಸ ಜೀವನಸಂಗಾತಿ ಜಾಯ್ ಕ್ರಿಜಿಲ್ಡಾ ತಮ್ಮ ಗರ್ಭಧಾರಣೆಯ ವಿಚಾರವನ್ನೂ ಬಹಿರಂಗಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಹುಟ್ಟಿಸಿದೆ.

ಕಾಲಿವುಡ್‌ನಲ್ಲಿ ಅಭಿನಯದ ಮೂಲಕ ಗುರುತಿಸಿಕೊಂಡಿರುವ ಮತ್ತು ಶೆಫ್‌ ಆಗಿಯೂ ಖ್ಯಾತಿಯಲ್ಲಿರುವ ಮಾಧಂಪಟ್ಟಿ ರಂಗರಾಜ್, ಫ್ಯಾಷನ್ ಡಿಸೈನರ್‌ ಜಾಯ್ ಕ್ರಿಜಿಲ್ಡಾ ಅವರೊಂದಿಗೆ ಇತ್ತೀಚೆಗೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಬಂಧನಕ್ಕಿಳಿದಿದ್ದರು. ಮದುವೆಯ ಫೋಟೋಗಳನ್ನು ಜಾಯ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು, ಇದನ್ನು ಅಧಿಕೃತವಾಗಿಸಿ ಅಭಿಮಾನಿಗಳ ಬಳಿ ಹಂಚಿಕೊಂಡಿದ್ದರು.

ಅದಾದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಸಂತೋಷದ ಸುದ್ದಿಯನ್ನು ಜಾಯ್ ಶೇರ್ ಮಾಡಿಕೊಂಡಿದ್ದಾರೆ. “ಬೇಬಿ ಲೋಡಿಂಗ್ 2025… ಈಗಾಗಲೇ ನಾನು 6 ತಿಂಗಳ ಗರ್ಭಿಣಿ” ಎಂಬ ಉಲ್ಲಾಸಭರಿತ ಪೋಸ್ಟ್‌ ಮೂಲಕ ಸುದ್ದಿ ತಿಳಿಸಿದ್ದಾರೆ. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್‌ ಆಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

ಆದರೆ ಈ ನಡುವೆ ಹಲವು ಪ್ರಶ್ನೆಗಳೂ ಕೇಳಿಬರುತ್ತಿವೆ. ಮಾಧಂಪಟ್ಟಿ ರಂಗರಾಜ್ ಅವರಿದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಶ್ರುತಿ ರಂಗರಾಜ್ ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ದಂಪತಿಯ ಇಬ್ಬರು ಮಕ್ಕಳು ಇವತ್ತಿಗೂ ಶ್ರುತಿ ಅವರ ಜೊತೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಶ್ರುತಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಎಂಬ ಹೆಸರನ್ನು ಮುಂದುವರಿಸಿದ್ದಾರೆ.

ವಿಚ್ಛೇದನದ ವಿಚಾರದಲ್ಲಿ ಸ್ಪಷ್ಟತೆ ಇಲ್ಲದೇ ಇರುವುದರಿಂದ, ಮಾಧಂಪಟ್ಟಿ ರಂಗರಾಜ್ ಹಾಗೂ ಶ್ರುತಿ ಪ್ರತ್ಯೇಕರಾಗಿದ್ದಾರೆ ಎಂಬುದನ್ನು ಅಧಿಕೃತವಾಗಿ ದೃಢಪಡಿಸಲು ಸಾಧ್ಯವಾಗಿಲ್ಲ. ಶ್ರುತಿ ಈ ಹೊಸ ಮದುವೆ ಅಥವಾ ಗರ್ಭಧಾರಣೆ ಕುರಿತು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದರಿಂದಾಗಿ ಮಾಧಂಪಟ್ಟಿ ರಂಗರಾಜ್ ಅವರ ವೈಯಕ್ತಿಕ ಜೀವನ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮದುವೆ ಮತ್ತು ತಾಯಿಯಾಗುವ ಸುದ್ದಿ ಒಂದೇ ದಿನ ಬಂದಿರುವ ಈ ಬೆಳವಣಿಗೆ, ಚಲಚಿತ್ರ ಮತ್ತು ಫ್ಯಾಷನ್ ಲೋಕದ ಸುದ್ದಿಯಲ್ಲೇ ಪ್ರಸ್ತುತ ಟಾಪಿಕ್ ಆಗಿ ಪರಿಣಮಿಸಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago