ಮಾಧಂಪಟ್ಟಿ ರಂಗರಾಜ್ ಅವರ ಹೊಸ ಜೀವನಸಂಗಾತಿ ಜಾಯ್ ಕ್ರಿಜಿಲ್ಡಾ ತಮ್ಮ ಗರ್ಭಧಾರಣೆಯ ವಿಚಾರವನ್ನೂ ಬಹಿರಂಗಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ಹುಟ್ಟಿಸಿದೆ.
ಕಾಲಿವುಡ್ನಲ್ಲಿ ಅಭಿನಯದ ಮೂಲಕ ಗುರುತಿಸಿಕೊಂಡಿರುವ ಮತ್ತು ಶೆಫ್ ಆಗಿಯೂ ಖ್ಯಾತಿಯಲ್ಲಿರುವ ಮಾಧಂಪಟ್ಟಿ ರಂಗರಾಜ್, ಫ್ಯಾಷನ್ ಡಿಸೈನರ್ ಜಾಯ್ ಕ್ರಿಜಿಲ್ಡಾ ಅವರೊಂದಿಗೆ ಇತ್ತೀಚೆಗೆ ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಬಂಧನಕ್ಕಿಳಿದಿದ್ದರು. ಮದುವೆಯ ಫೋಟೋಗಳನ್ನು ಜಾಯ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡು, ಇದನ್ನು ಅಧಿಕೃತವಾಗಿಸಿ ಅಭಿಮಾನಿಗಳ ಬಳಿ ಹಂಚಿಕೊಂಡಿದ್ದರು.
ಅದಾದ ಕೆಲವೇ ಗಂಟೆಗಳಲ್ಲಿ ಮತ್ತೊಂದು ಸಂತೋಷದ ಸುದ್ದಿಯನ್ನು ಜಾಯ್ ಶೇರ್ ಮಾಡಿಕೊಂಡಿದ್ದಾರೆ. “ಬೇಬಿ ಲೋಡಿಂಗ್ 2025… ಈಗಾಗಲೇ ನಾನು 6 ತಿಂಗಳ ಗರ್ಭಿಣಿ” ಎಂಬ ಉಲ್ಲಾಸಭರಿತ ಪೋಸ್ಟ್ ಮೂಲಕ ಸುದ್ದಿ ತಿಳಿಸಿದ್ದಾರೆ. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.
ಆದರೆ ಈ ನಡುವೆ ಹಲವು ಪ್ರಶ್ನೆಗಳೂ ಕೇಳಿಬರುತ್ತಿವೆ. ಮಾಧಂಪಟ್ಟಿ ರಂಗರಾಜ್ ಅವರಿದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಶ್ರುತಿ ರಂಗರಾಜ್ ವಕೀಲೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ದಂಪತಿಯ ಇಬ್ಬರು ಮಕ್ಕಳು ಇವತ್ತಿಗೂ ಶ್ರುತಿ ಅವರ ಜೊತೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಶ್ರುತಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಎಂಬ ಹೆಸರನ್ನು ಮುಂದುವರಿಸಿದ್ದಾರೆ.
ವಿಚ್ಛೇದನದ ವಿಚಾರದಲ್ಲಿ ಸ್ಪಷ್ಟತೆ ಇಲ್ಲದೇ ಇರುವುದರಿಂದ, ಮಾಧಂಪಟ್ಟಿ ರಂಗರಾಜ್ ಹಾಗೂ ಶ್ರುತಿ ಪ್ರತ್ಯೇಕರಾಗಿದ್ದಾರೆ ಎಂಬುದನ್ನು ಅಧಿಕೃತವಾಗಿ ದೃಢಪಡಿಸಲು ಸಾಧ್ಯವಾಗಿಲ್ಲ. ಶ್ರುತಿ ಈ ಹೊಸ ಮದುವೆ ಅಥವಾ ಗರ್ಭಧಾರಣೆ ಕುರಿತು ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದರಿಂದಾಗಿ ಮಾಧಂಪಟ್ಟಿ ರಂಗರಾಜ್ ಅವರ ವೈಯಕ್ತಿಕ ಜೀವನ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಮದುವೆ ಮತ್ತು ತಾಯಿಯಾಗುವ ಸುದ್ದಿ ಒಂದೇ ದಿನ ಬಂದಿರುವ ಈ ಬೆಳವಣಿಗೆ, ಚಲಚಿತ್ರ ಮತ್ತು ಫ್ಯಾಷನ್ ಲೋಕದ ಸುದ್ದಿಯಲ್ಲೇ ಪ್ರಸ್ತುತ ಟಾಪಿಕ್ ಆಗಿ ಪರಿಣಮಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…