ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ಇನ್ಶೂರೆನ್ಸ್ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ಇನ್ಶೂರೆನ್ಸ್ ಮಾಡಿಸುವ ಬಹಳಷ್ಟು ವಾಹನ ಮಾಲೀಕರು ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ಅಪಘಾತಗಳು ನಡೆದ ಸಂದರ್ಭದಲ್ಲಿ ಅಂತಹ ವಾಹನಗಳ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ. ಅಷ್ಟಾದರೂ ಕೂಡಾ ಇನ್ಶೂರೆನ್ಸ್ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ.
ಯಾವ ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಇನ್ಶೂರೆನ್ಸ್ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ಇನ್ಶೂರೆನ್ಸ್ ರಿನಿವಲ್ ಮಾಡದ ಮಾಲೀಕರಿಗೆ ದಂಡ ವಿಧಿಸುವ ಸಾಧ್ಯತೆಯೂ ಇದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…