ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ಇನ್ಶೂರೆನ್ಸ್ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ಇನ್ಶೂರೆನ್ಸ್ ಮಾಡಿಸುವ ಬಹಳಷ್ಟು ವಾಹನ ಮಾಲೀಕರು ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ಅಪಘಾತಗಳು ನಡೆದ ಸಂದರ್ಭದಲ್ಲಿ ಅಂತಹ ವಾಹನಗಳ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ. ಅಷ್ಟಾದರೂ ಕೂಡಾ ಇನ್ಶೂರೆನ್ಸ್ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ.
ಯಾವ ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಇನ್ಶೂರೆನ್ಸ್ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ಇನ್ಶೂರೆನ್ಸ್ ರಿನಿವಲ್ ಮಾಡದ ಮಾಲೀಕರಿಗೆ ದಂಡ ವಿಧಿಸುವ ಸಾಧ್ಯತೆಯೂ ಇದೆ.
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…