ವಾಹನಗಳಿಗೆ ಇನ್ಶೂರೆನ್ಸ್ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ಇನ್ಶೂರೆನ್ಸ್ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ಇನ್ಶೂರೆನ್ಸ್ ಮಾಡಿಸುವ ಬಹಳಷ್ಟು ವಾಹನ ಮಾಲೀಕರು ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ಅಪಘಾತಗಳು ನಡೆದ ಸಂದರ್ಭದಲ್ಲಿ ಅಂತಹ ವಾಹನಗಳ ಮಾಲೀಕರಿಗೆ ತೀವ್ರ ಸಂಕಷ್ಟ ಎದುರಾಗುತ್ತದೆ. ಅಷ್ಟಾದರೂ ಕೂಡಾ ಇನ್ಶೂರೆನ್ಸ್ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ.
ಯಾವ ವಾಹನಗಳಿಗೆ ಇನ್ಶೂರೆನ್ಸ್ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ಇನ್ಶೂರೆನ್ಸ್ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ಇನ್ಶೂರೆನ್ಸ್ ರಿನಿವಲ್ ಮಾಡದ ಮಾಲೀಕರಿಗೆ ದಂಡ ವಿಧಿಸುವ ಸಾಧ್ಯತೆಯೂ ಇದೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…