ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಂಬೈ ಪೊಲೀಸರು ನ್ಯಾಯಾಲಯಕ್ಕೆ 524 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಆರೋಪಿ ಶೆಜಾನ್ ಖಾನ್ ಹಾಗೂ ನಟಿ ತುನಿಶಾ ಶರ್ಮಾ ನಡುವಿನ ವಾಟ್ಸಾಪ್ ಚಾಟ್ ಸೇರಿದಂತೆ ಹಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ. ತುನಿಶಾ ಶರ್ಮಾ ಜೊತೆಗೆ ಅಭಿನಯಿಸಿದ್ದ ಸಹ ನಟರು ಸೇರಿದಂತೆ ಒಟ್ಟು 31 ಮಂದಿಯನ್ನು ಸಾಕ್ಷಿಯನ್ನಾಗಿ ಪೊಲೀಸರು ಪ್ರಸ್ತಾಪಿಸಿದ್ದು, ತುನಿಶಾ ಶರ್ಮಾ ಹಾಗೂ ಶೆಜಾನ್ ಖಾನ್ ನಡುವೆ ಹತ್ತು ನಿಮಿಷಗಳ ಕಾಲ ನಡೆದಿದ್ದ ಮೊಬೈಲ್ ಸಂಭಾಷಣೆ ಕುರಿತೂ ಮಾಹಿತಿ ನೀಡಿದ್ದಾರೆ. ಇದಾದ ಬಳಿಕವೇ ತುನಿಶಾ ಶರ್ಮಾ ಆತ್ಮಹತ್ಯೆ ನಿರ್ಧಾರ ಕೈಗೊಂಡರೆಂದು ಹೇಳಲಾಗಿದೆ.
ಡಿಸೆಂಬರ್ 24, 2022 ರಂದು ನಟಿ ತುನಿಶಾ ಶರ್ಮಾ ಮೇಕಪ್ ರೂಮಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದು, ತನ್ನ ಪುತ್ರಿಯ ಸಾವಿಗೆ ನಟ ಶೆಜಾನ್ ಖಾನ್ ಕಾರಣ ಎಂದು ಆಕೆಯ ತಾಯಿ ಆರೋಪಿಸಿದ್ದರು. ಈ ಹಿನ್ನಲೆಯಲ್ಲಿ ಶೆಜಾನ್ ನನ್ನು ಬಂಧಿಸಿದ್ದ ಪೊಲೀಸರು ಇದೀಗ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…