Latest

ಬಿಹಾರ ಚುನಾವಣೆ: ಸ್ಯಾನಿಟರಿ ಪ್ಯಾಡ್‌ಗಳ ಮೇಲೆ ರಾಹುಲ್ ಗಾಂಧಿ ಫೋಟೋ ವಿವಾದಕ್ಕೆ ಕಾರಣ

ಬಿಹಾರ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಮಹಿಳಾ ಮತದಾರರ ಮೆಚ್ಚುಗೆ ಗಳಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ವಿಶಿಷ್ಟ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. “ಪ್ರಿಯದರ್ಶಿನಿ ಉಡಾನ್” ಯೋಜನೆಯಡಿ ರಾಜ್ಯಾದ್ಯಂತ ಐದು ಲಕ್ಷ ಸ್ಯಾನಿಟರಿ ಪ್ಯಾಡ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಆದರೆ, ಈ ಅಭಿಯಾನ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ವಿತರಣೆಯಾದ ಸ್ಯಾನಿಟರಿ ಪ್ಯಾಡ್‌ಗಳ ಪ್ಯಾಕೆಟ್ ಮಾತ್ರವಲ್ಲದೆ, ಅದರ ಒಳಭಾಗದಲ್ಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಫೋಟೋ ಮುದ್ರಿಸಿರುವುದು ಹೊರಬಿದ್ದಿದೆ. ಈ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಯ ಫೋಟೋ ಹೊಂದಿರುವ ಸ್ಯಾನಿಟರಿ ಪ್ಯಾಡ್‌ ಪ್ಯಾಕೆಟ್ ಅನ್ನು ಅನ್‌ಬಾಕ್ಸ್ ಮಾಡುವ ದೃಶ್ಯವಿರುವ ವಿಡಿಯೋ ಒಂದು ವೈರಲ್ ಆಗಿದ್ದು, ಈ ಮೂಲಕ ಕಾಂಗ್ರೆಸ್ಸಿನ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮ ಬಳಕೆದಾರರು ಇದನ್ನು ಕಾಂಗ್ರೆಸ್ ಪಕ್ಷದ “ತಗ್ಗಿದ ಮಟ್ಟದ ರಾಜಕೀಯ ಪ್ರಚಾರ” ಎಂದು ವಿಂಗಡಿಸಿದ್ದಾರೆ. “ಮಹಿಳಾ ಸಬಲೀಕರಣ ಹೆಸರಿನಲ್ಲಿ ಈ ರೀತಿಯ ಅಭಿಯಾನ ನಾಚಿಕೆಗೇಡು. ಸ್ಯಾನಿಟರಿ ಪ್ಯಾಡ್‌ನಲ್ಲಿ ನಾಯಕನ ಫೋಟೋ ಬಳಸುವುದು ಮಹಿಳೆಯರ ಗೌರವವನ್ನು ಹಿಮ್ಮೆಟ್ಟಿಸುವಂತದ್ದು,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಬ್ಬರು, “ಇದು ಗಂಭೀರ ವಿವಾದವಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಪ್ರತಿಕ್ರಿಯಿಸಿದ್ದಾರೆ.

ರಾಜಕೀಯ ವಿರೋಧಿಗಳೂ ಸಹಕಾಂಗ್ರೆಸ್ ನ ಈ ಹೆಜ್ಜೆಯನ್ನು ಗಂಭೀರವಾಗಿ ಟೀಕಿಸುತ್ತಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ವಕ್ತಾರ ನೀರಜ್ ಕುಮಾರ್ ಈ ವಿಚಾರದ ಕುರಿತು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು, “ಅಧಿಕಾರದ ಆಸೆಗೆ ಕಾಂಗ್ರೆಸ್ ಎಲ್ಲ ಹದ ಮೀರುತ್ತಿದೆ. ಮಹಿಳಾ ಸಬಲೀಕರಣ ಎಂಬ ಹೆಸರಿನಲ್ಲಿ ಇಂತಹ ಕೆಲಸಗಳು ಸರಿಯಲ್ಲ. ಇದು ಕೇವಲ ಚುನಾವಣಾ ಗಿಮಿಕ್,” ಎಂದು ಆರೋಪಿಸಿದ್ದಾರೆ. ಅವರು ಮುಂದುವರೆದು, “ಬಿಹಾರದ ಮಹಿಳೆಯರು ಗೌರವದ ಸಂಕೇತ. ಅವರ ಸ್ವಾಭಿಮಾನವನ್ನು ಭಂಗಪಡಿಸುವ ಕೆಲಸವನ್ನು ಯಾವುದೇ ರಾಜಕೀಯ ಪಕ್ಷದಿಂದ ನಿರೀಕ್ಷಿಸಲಾರದು,” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, ಈ ಅಭಿಯಾನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇದುವರೆಗೆ ಬಂದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನದ ಸತ್ಯಾಸತ್ಯತೆ ಹಾಗೂ ಉದ್ದೇಶದ ಕುರಿತು ಚರ್ಚೆಗಳು ಮುಂದುವರೆದಿವೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago