ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ ಹುಸ್ಕೂರು ಶಿರಮಳ್ಳಿ ರಸ್ತೆಯಲ್ಲಿ ನಡೆದಿದೆ. ಅಪಘಾತಲ್ಲಿ ಹುಸ್ಕೂರು ಗ್ರಾಮದ ನಿವಾಸಿ ದರ್ಶನ್ (15) ಎಂಬಾತನೆ ಮೃತಪಟ್ಟಿರುವ ದುರ್ದೈವಿ. ಬೈಕ್ ನಲ್ಲಿ ಬರುವಾಗ ಎದುರು ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ತೀವ್ರ ಗಾಯಗೊಂಡ ಪುನೀತ್ ನನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಪ್ರಕರಣ ದಾಖಲಿಸಿಕೊಂಡಿರುವ ಹುಲ್ಲಹಳ್ಳಿ ಪೊಲೀಸರು ಟಿಪ್ಪರ್ ಮತ್ತು ಬೈಕ್ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹದೇವ ಶೆಟ್ಟಿ ಪತ್ರಿಕೆಯೊಂದಿಗೆ ಮಾತನಾಡಿ ಗುಂಡ್ಲುಪೇಟೆ ತಾಲೂಕು ಹಿರಿ ಕಾಟಿಯಿಂದ ದೊಡ್ಡ ದೊಡ್ಡ ಟಿಪ್ಪರ್ ಗಳು ಎಂ ಸ್ಯಾಂಡ್ ತುಂಬಿಕೊಂಡು ಅಜಾಗರೂ ಕತೆಯಿಂದ ಸಂಚರಿಸುತ್ತಿವೆ. ಅಲ್ಲದೆ ಇದೇ ಮಾರ್ಗದಲ್ಲಿ ಶಿರಮಳ್ಳಿ ಬಳಿ ಕಬಿನಿ ಬಲದಂಡೆ ನಾಲೆಯ ಸೇತುವೆ ಸಹ ಶಿಥಿಲ ಗೊಂಡಿದ್ದು ಇದು ಕೂಡ ಅಪಘಾತಕ್ಕೆ ಕಾರಣವಾಗುತ್ತಿದೆ ಹಾಗಾಗಿ ಸಂಬಂಧಪಟ್ಟವರು ಹಾಗೂ ಪೊಲೀಸ್ ಇಲಾಖೆ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವರದಿ: ಮೋಹನ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…