ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ ಹುಸ್ಕೂರು ಶಿರಮಳ್ಳಿ ರಸ್ತೆಯಲ್ಲಿ ನಡೆದಿದೆ. ಅಪಘಾತಲ್ಲಿ ಹುಸ್ಕೂರು ಗ್ರಾಮದ ನಿವಾಸಿ ದರ್ಶನ್ (15) ಎಂಬಾತನೆ ಮೃತಪಟ್ಟಿರುವ ದುರ್ದೈವಿ. ಬೈಕ್ ನಲ್ಲಿ ಬರುವಾಗ ಎದುರು ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ತೀವ್ರ ಗಾಯಗೊಂಡ ಪುನೀತ್ ನನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಪ್ರಕರಣ ದಾಖಲಿಸಿಕೊಂಡಿರುವ ಹುಲ್ಲಹಳ್ಳಿ ಪೊಲೀಸರು ಟಿಪ್ಪರ್ ಮತ್ತು ಬೈಕ್ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹದೇವ ಶೆಟ್ಟಿ ಪತ್ರಿಕೆಯೊಂದಿಗೆ ಮಾತನಾಡಿ ಗುಂಡ್ಲುಪೇಟೆ ತಾಲೂಕು ಹಿರಿ ಕಾಟಿಯಿಂದ ದೊಡ್ಡ ದೊಡ್ಡ ಟಿಪ್ಪರ್ ಗಳು ಎಂ ಸ್ಯಾಂಡ್ ತುಂಬಿಕೊಂಡು ಅಜಾಗರೂ ಕತೆಯಿಂದ ಸಂಚರಿಸುತ್ತಿವೆ. ಅಲ್ಲದೆ ಇದೇ ಮಾರ್ಗದಲ್ಲಿ ಶಿರಮಳ್ಳಿ ಬಳಿ ಕಬಿನಿ ಬಲದಂಡೆ ನಾಲೆಯ ಸೇತುವೆ ಸಹ ಶಿಥಿಲ ಗೊಂಡಿದ್ದು ಇದು ಕೂಡ ಅಪಘಾತಕ್ಕೆ ಕಾರಣವಾಗುತ್ತಿದೆ ಹಾಗಾಗಿ ಸಂಬಂಧಪಟ್ಟವರು ಹಾಗೂ ಪೊಲೀಸ್ ಇಲಾಖೆ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ವರದಿ: ಮೋಹನ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…